Webdunia - Bharat's app for daily news and videos

Install App

ರೈತ ಸಂಘದ ಕಾರ್ಯದರ್ಶಿ ಪ್ರತೀಶ್ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ರೈತರ ಧರಣಿ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (21:05 IST)
ಚಿಕ್ಕಬಳ್ಳಾಪುರ ಜಿಲ್ಲೆಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮೇಲೆ ಇದೇ ತಿಂಗಳ 9 ರಂದು ಬೆಳಗ್ಗೆ 6:40ರ ಸಮಯದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು ಈ ಕ್ರತ್ಯ ವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಿಡ್ಲಘಟ್ಟ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
 
ಭಕ್ತರಹಳ್ಳಿ ಪ್ರತೀಶ್ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳು ತಲೆ ಎಡಭಾಗಕ್ಕೆ ಮಚ್ಚಿನಿಂದ ಹೊಡೆದು ಬೆನ್ನಿಗೆ ಚಾಕುನಿಂದ ಬಲವಾಗಿ ಹಾಗೂ ಎದೆ ಭಾಗದಲ್ಲಿ ಆರು ಬಾರಿ ಚಾಕುವಿನಿಂದ ಹರಿದಿದ್ದು ಪ್ರಸ್ತುತ ಪ್ರತೀಶ್ ರವರು ಸ್ಥಿತಿ ಚಿಂತಾಜನಕವಾಗಿರುತ್ತದೆ ಕುಟುಂಬದ ಮಹಿಳೆಯರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುತ್ತಾರೆ,ಹಲ್ಲೆ ಮಾಡಿರುವಂತಹ ಆರೋಪಿಗಳು ಅದೇ ಗ್ರಾಮದ  ಉದಯ್ಕುಮಾರ್
,ರಾಮಚಂದ್ರಪ್ಪ,ಹೇಮಂತ್,ಗೋವಿಂದಪ್ಪ,ನಂದೀಶ್ ಎಂಬವರ ಪೈಕಿ ಇಬ್ಬರನ್ನು ಮಾತ್ರ ಪೊಲೀಸರು ಬಂಡಿಸಿರುತ್ತಾರೆ.ಆದರೆ ಉಳಿದ ಹಲ್ಲೇ ಕೋರರು ಮತ್ತು ಸಫಾರಿ ಕೋರರನ್ನು ಇನ್ನು ಬಂಧಿಸಿರುವುದಿಲ್ಲ.ಅದರಿಂದ ಉಳಿದ ಹಲ್ಲೇ ಕೊರರನ್ನು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಇಡೀ ಕರ್ನಾಟಕ ರಾಜ್ಯದ್ಯಂತ ಉಗ್ರ ಹೋರಾಟ ಮಾಡುತ್ತವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಎಚ್ಚರಿಕೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments