Webdunia - Bharat's app for daily news and videos

Install App

ಮೋದಿ ಭೇಟಿ ಅವಕಾಶಕ್ಕೆ ರೈತರ ಪಟ್ಟು

Webdunia
ಬುಧವಾರ, 11 ಜನವರಿ 2023 (17:57 IST)
ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ ಭೇಟಿ ವೇಳೆ ಕಪ್ಪು ಪಟ್ಟಿಯನ್ನು ಪ್ರದರ್ಶಿಸಲು ರೈತರು ಮುಂದಾಗಿದ್ದಾರೆ. ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ತೀರ್ಮಾನ ಮಾಡಲಾಗಿದೆ. ಮಹದಾಯಿ ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲು ಆಗ್ರಹಿಸಿ ಮೋದಿಗೆ ಮನವಿ ಕೊಡಲು ರೈತರು ತೀರ್ಮಾನಿಸಿದ್ದಾರೆ. ಇದಕ್ಕೆ ಅವಕಾಶ ಕೊಡುವಂತೆ ಅವರು ಪಟ್ಟು ಹಿಡಿದಿದ್ದಾರೆ. ಪ್ರಧಾನಿಗಳು ಮೂರು ರಾಜ್ಯಗಳಾದ ಕರ್ನಾಟಕ, ಗೋವ, ಮಹಾರಾಷ್ಟ್ರದ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಆಲಮಟ್ಟಿ ಜಲಾಶಯದ ಗೇಟ್​​ಗಳ ಎತ್ತರಕ್ಕೂ ಕ್ರಮ ಕೈಗೊಳ್ಳಬೇಕು. ತುಂಗಭದ್ರಾ ಡ್ಯಾಂ ಹೂಳು ತೆಗೆಸಬೇಕು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು. ಹೀಗೆ ಹತ್ತು ಹಲವು ಮನವಿಯನ್ನು ಸಲ್ಲಿಸಲು ಅವರು ತೀರ್ಮಾನಿಸಿದ್ದು, ಮೋದಿ ಭೇಟಿಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments