Webdunia - Bharat's app for daily news and videos

Install App

ವಸತಿ ಶಾಲೆಯ ಕಂಪೌಂಡ್ ವಿಷಯಕ್ಕೆ ರೈತರು ಫುಲ್ ಗರಂ

Webdunia
ಸೋಮವಾರ, 24 ಫೆಬ್ರವರಿ 2020 (18:00 IST)
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಂಪೌಂಡ್ ವಿಷಯಕ್ಕೆ ಇದೀಗ ರೈತರು ಗರಂ ಆಗಿದ್ದಾರೆ.

ಮಂಡ್ಯದ ಮಾದಾಪುರ ಗ್ರಾಮದಲ್ಲಿ ಜಮೀನುಗಳಿಗೆ ಹೋಗಲು ರಸ್ತೆಯನ್ನು ಬಿಡದೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಾಂಪೌಂಡ್ ನಿರ್ಮಿಸಲಾಗುತ್ತಿದೆ. ಈ ಕ್ರಮ ಖಂಡಿಸಿ ಕೆ.ಆರ್. ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮಿನಿವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ನೂರಾರು ಎಕರೆ ಜಮೀನಿಗೆ ಹೋಗಿ ಬರಲು, ಕೃಷಿ ಚಟುವಟಿಕೆಗಳನ್ನು ಮಾಡಲು ಕಂಪೌಂಡ್ ನಿರ್ಮಾಣದಿಂದ ತೊಂದರೆಯಾಗುತ್ತದೆ. ಆದ್ದರಿಂದ ಕೂಡಲೇ ಕಾಮಗಾರಿಯನ್ನು ನಿಲ್ಲಿಸಿ ರಸ್ತೆಗೆ ಅಗತ್ಯವಾಗಿ ಬೇಕಾಗಿರುವ ಭೂಮಿಯನ್ನು ಬಿಡಿಸಿಕೊಟ್ಟು ನಂತರವಷ್ಟೇ ಕಾಮಗಾರಿ ನಡೆಸಬೇಕು. ಹೀಗಂತ ರೈತರ ಆಗ್ರಹಕ್ಕೆ ಮಣಿದ ತಹಶೀಲ್ದಾರ್ ಎಂ.ಶಿವಮೂರ್ತಿ, ಜಿಲ್ಲಾಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದು ಸಮಸ್ಯೆಗೆ ಪರಿಹಾರ ಕಂಡುಹಿಡಿಯುವವರೆಗೆ ಕಾಮಗಾರಿಯನ್ನು ನಿಲ್ಲಿಸುವಂತೆ ಸಂಬಂಧಿಸಿದ ಮೊರಾರ್ಜಿ ವಸತಿಶಾಲೆಯ ಎಂಜಿನಿಯರ್ ಗೆ ಆದೇಶ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments