Webdunia - Bharat's app for daily news and videos

Install App

ನಾಲ್ಕು ಜಿಲ್ಲೆಯ ರೈತರಿಗೆ ವಕ್ಫ್ ಭೀತಿ: ಪಹಣಿಗಾಗಿ ಕಚೇರಿ ಮುಂದೆ ಕ್ಯೂ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (11:47 IST)
ಬೆಂಗಳೂರು: ಕೇವಲ ವಿಜಯಪುರ ಮಾತ್ರವಲ್ಲ, ಈಗ ನಾಲ್ಕು ಜಿಲ್ಲೆಯ ರೈತರಿಗೆ ವಕ್ಫ್ ಭೀತಿ ಎದುರಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಪರಿಶೀಲನೆಗಾಗಿ ತಹಶೀಲ್ದಾರ್ ಕಚೇರಿ ಎದುರು ಕ್ಯೂ ನಿಂತಿದ್ದಾರೆ.

ವಿಜಯಪುರ ಬಳಿಕ ಧಾರವಾಡದ ಉಪ್ಪಿನ ಬಟಗೇರಿ ಗ್ರಾಮದ ರೈತರ ಜಮೀನೂ ವಕ್ಫ್ ಎಂದು ನಮೂದಾಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ತಮ್ಮ ತಲೆತಲಾಂತರದಿಂದಲೂ ಉಳುಮೆ ಮಾಡಿಕೊಂಡು ಬಂದಿದ್ದ ಜಮೀನು ದಿಡೀರ್ ಆಗಿ ವಕ್ಫ್ ಎಂದು ನಮೂದಾಗಿದ್ದು ರೈತರ ಆತಂಕಕ್ಕೆ ಕಾರಣವಾಗಿತ್ತು.

ಇನ್ನಷ್ಟು ಕೂಲಂಕುಷವಾಗಿ ನೋಡಿದಾಗ ಕೇವಲ ವಿಜಯಪುರ, ಧಾರವಾಡ ಮಾತ್ರವಲ್ಲ, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಭಯ ಶುರುವಾಗಿದೆ. ವಿಜಯಪುರ, ಧಾರವಾಡ ಮಾತ್ರವಲ್ಲದೆ ಕಲಬುರಗಿ, ಬೀದರ್, ಬಾಗಲಕೋಟೆಯಲ್ಲೂ ವಕ್ಫ್ ಆಸ್ತಿ ಎಂದು ನಮೂದಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ಹಿನ್ನಲೆಯಲ್ಲಿ ಈ ಜಿಲ್ಲೆಯ ರೈತರು ತಮ್ಮ ಜಮೀನು ಪಹಣಿ ಪರಿಶೀಲನೆಗಾಗಿ ನೋಂದಣಿ ಕಚೇರಿ, ತಹಶೀಲ್ದಾರ್ ಕಚೇರಿ ಮುಂದೆ ಕ್ಯೂ ನಿಂತಿದ್ದಾರೆ. ತಮ್ಮ ಜಮೀನೂ ವಕ್ಫ್ ಆಸ್ತಿ ಎಂದು ನಮೂದಾಗಿದೆಯೇ ಎಂದು ಪರೀಲನೆ ಮಾಡಲು ಮುಂದಾಗಿದ್ದಾರೆ. ವಿಜಯಪುರದಲ್ಲಿ 124 ಕ್ಕೂ ಹೆಚ್ಚು ರೈತರ ಆಸ್ತಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಸುದ್ದಿ ಬೆನ್ನಲ್ಲೇ ಇತರೆ ಜಿಲ್ಲೆಗಳಲ್ಲೂ ಆತಂಕ ಮನೆ ಮಾಡಿದೆ.

ಇದರ ನಡುವೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ವಕ್ಫ್ ಬೋರ್ಡ್ ಗೆ ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲವೆಡೆ ಅಧಿಕಾರಿಗಳ ಎಡವಟ್ಟಿನಿಂದ ವಕ್ಫ್ ಆಸ್ತಿ ಎಂದು ನಮೂದಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ವಿಜಯಪುರ ಪ್ರಕರಣದ ನಂತರ ರೈತರು ಈಗ ಎಚ್ಚೆತ್ತುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments