Select Your Language

Notifications

webdunia
webdunia
webdunia
webdunia

ಸಾಲ ಮನ್ನಾ ಮಾಡಿ, ಇಲ್ಲವೆ ಅಧಿಕಾರ ಬಿಟ್ಟು ತೊಲಗಿ: ಬಿಎಸ್‌ವೈ ಗುಡುಗು

ಸಾಲ ಮನ್ನಾ ಮಾಡಿ, ಇಲ್ಲವೆ ಅಧಿಕಾರ ಬಿಟ್ಟು ತೊಲಗಿ: ಬಿಎಸ್‌ವೈ ಗುಡುಗು
ರಾಯಚೂರು , ಮಂಗಳವಾರ, 30 ಮೇ 2017 (15:22 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರೈತರ ಸಾಲವನ್ನು ಮನ್ನಾ ಮಾಡಿ. ಇಲ್ಲವೇ ಅಧಿಕಾರ ಬಿಟ್ಟು ತೊಲಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ಜನಸಂಪರ್ಕ ಸಭೆಗಾಗಿ ನಗರಕ್ಕೆ ಆಗಮಿಸಿರುವ ಯಡಿಯೂರಪ್ಪ ಮಾತನಾಡಿ, ಜೂನ್‌ ತಿಂಗಳ ಅಂತ್ಯದವರೆಗೆ ರೈತರ ಸಾಲ ಮನ್ನಾ ಮಾಡಲು ಸರಕಾರಕ್ಕೆ ಕಾಲಾವಕಾಶ ನೀಡುತ್ತಿದ್ದೇವೆ. ಒಂದು ವೇಳೆ ರೈತರ ಸಾಲ ಮನ್ನಾ ಮಾಡದಿದ್ದಲ್ಲಿ 4-5 ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರು ಮರಳು ಅಕ್ರಮ ಸಾಗಾಣಿಕೆಯಲ್ಲಿ ತೊಡಗಿದ್ದಾರೆ ಎನ್ನುವುದು ಕೇಳಿಬರುತ್ತಿದೆ. ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಹೆಸರು ಕೂಡಾ ಕೇಳಿ ಬಂದಿದೆ ಎಂದು ಆರೋಪಿಸಿದರು.
 
ನಗರಕ್ಕೆ ಆಗಮಿಸುತ್ತಿದ್ದಂತೆ ಯಡಿಯೂರಪ್ಪ ಮತ್ತು ಅವರ ತಂಡ ಅಟೋ ಚಾಲಕನೊಬ್ಬನ ಮನೆಯಲ್ಲಿ ಭೋಜನ ಸವಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ