Webdunia - Bharat's app for daily news and videos

Install App

ಮಳೆಯಿಂದ ಬೆಳೆ ಹಾನಿ

Webdunia
ಭಾನುವಾರ, 21 ನವೆಂಬರ್ 2021 (17:56 IST)
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತಕ್ಕೆ ಕಳೆದ ಎರಡು ವಾರಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಸುರಿದ ಭಾರೀ ಮಳೆಗೆ ಜನರ ಬದುಕು ಅಕ್ಷರಶಃ ನಲುಗಿಹೋಗಿದೆ.ಸಾವಿರಾರು ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಮಳೆಹಾನಿ ಪೀಡಿತ ಹಲವು ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಲೆನಾಡು ಭಾಗದಲ್ಲಿ ಅಡಿಕೆ, ಕಾಫಿ, ಮೆಣಸು ಬೆಳೆ ಸಂಪೂರ್ಣ ಹಾಳಾಗಿದ್ದರೆ, ಬಯಲುಸೀಮೆಯ ಶೇಂಗಾ, ಈರುಳ್ಳಿ, ಉತ್ತರ ಕರ್ನಾಟಕ ಭಾಗದ ಮೆಕ್ಕೆ ಜೋಳ, ತೊಗರಿ, ಜೋಳ ಬೆಳೆ ನೀರಿನಲ್ಲಿ ಕೊಚ್ಚಿಹೋಗಿವೆ.
 
ಭತ್ತ, ರಾಗಿ ಸೇರಿದಂತೆ ಬಹುತೇಕ ಬೆಳೆ ಭಾರೀ ಮಳೆಯ ನೀರಿಗೆ ಆಹುತಿಯಾಗಿದ್ದು, ರೈತ ಸಮುದಾಯ ತಲೆ ಮೇಲೆ ಕೈಹೊತ್ತು ಕುಳಿತಿದೆ. ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿದ್ದ ರೈತರ ಕನಸು ಸಂಪೂರ್ಣ ಭಗ್ನವಾಗಿದೆ. ಮೆಕ್ಕೆಜೋಳ, ಶುಂಠಿ, ಹತ್ತಿ, ಮೆಣಸಿನ ಕಾಯಿ, ತರಕಾರಿ ಬೆಳೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು ಒಂದು ಲಕ್ಷ ಹೆಕ್ಟೇರ್ ಕೃಷಿ ಭೂಮಿ ಜಲಾವೃತಗೊಂಡಿದ್ದು, ಬೆಳೆ ಸಂಪೂರ್ಣ ಮುಳುಗಿ ಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments