ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ

Webdunia
ಭಾನುವಾರ, 26 ಸೆಪ್ಟಂಬರ್ 2021 (21:57 IST)
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ ಕೊಟ್ಟಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪುರಭವನದಿಂದ ಮೈಸೂರು ಬ್ಯಾಂಕ್​ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ರೈತ-ದಲಿತ ಸಂಘಟನೆಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ರೈತರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿಗಳು, 15 ಕ್ಕೂ ಅಧಿಕ ಎಸಿಪಿಗಳು, 100ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 200ಕ್ಕೂ ಹೆಚ್ಚು ಸಬ್ ಇನ್ಸ್​ಪೆಕ್ಟರ್​ಗಳು ಹಾಗೂ ಕಾನ್​ಸ್ಟೇಬಲ್​ಗಳು ಸೇರಿದಂತೆ 4 ಸಾವಿರಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ನಿರಂತರ ಗಸ್ತು ‌ತಿರುಗಾಟ:
ಹೊಯ್ಸಳ, ಚೀತಾ ವಾಹನಗಳ ಮೂಲಕ ನಿರಂತರ ಗಸ್ತು ‌ತಿರುಗಾಟ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಆಯಾ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ. 30ಕ್ಕೂ ಹೆಚ್ಚು ಕೆಎಸ್​ಆರ್​ಪಿ ತುಕಡಿಗಳು, 30ಕ್ಕೂ ಹೆಚ್ಚು ಸಿಎಆರ್​ ತುಕಡಿ ನಿಯೋಜಿಸಲಾಗಿದೆ. ಇದರ ಜೊತೆಗೆ ವಾಟರ್ ಜೆಟ್ ಇರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments