Select Your Language

Notifications

webdunia
webdunia
webdunia
webdunia

ಬಿರು ಬಿಸಿಲನ್ನೂ ಲೆಕ್ಕಿಸದೇ ರೈತರು ಉರುಳು ಸೇವೆ ಮಾಡಿದ್ದೇಕೆ?

ರೈತರು
ಬಿರು ಬಿಸಿಲನ್ನೂ ಲೆಕ್ಕಿಸದೇ ಉರುಳು‌ ಸೇವೆ ನಡೆಸಿದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ರೈತರಿಂದ ಉರುಳು ಸೇವೆ ಮಾಡಲಾಯಿತು. ವಿಜಯಪುರ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ನಡೆಯಿತು.

ಭೀಮಾ ಯೋಜನೆಯಲ್ಲಿ ಹಣ ಮಂಜೂರಾದರೂ ಬ್ಯಾಂಕ್ ಸಿಬ್ಬಂದಿ ನೋಟಿಸ್ ನೀಡುತ್ತಿದ್ದಾರೆ. ಬ್ಯಾಂಕಿನ ಸಿಬ್ಬಂದಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡದಂತೆ ತಿಳಿಸಬೇಕು. ರೈತರು ಬೆಳೆದ ಕಡ್ಲೀ, ತೊಗರಿ, ಉಳ್ಳಾಗಡ್ಡಿಗೆ ದರ ನಿಗದಿ ಮಾಡಬೇಕು ಎಂದು ರೈತರು ಒತ್ತಾಯಿಸಿದರು.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ರೈತರು, ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಕಾರಂಜಾ ನದಿ ನೀರಿಗಾಗಿ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ