ನೀವೇನು ಫಸ್ಟ್ ಟೈಮ್ ಸಿಎಂ ಆದ್ರಾ? ಘೋಷಣೆ ಮಾಡುವಾಗ ಯೋಚನೆ ಇರಲಿಲ್ವಾ? ಸಿಎಂ ಕುಮಾರಸ್ವಾಮಿಗೆ ಪ್ರಶ್ನೆ

Webdunia
ಸೋಮವಾರ, 19 ನವೆಂಬರ್ 2018 (10:12 IST)
ಬೆಂಗಳೂರು: ರೈತರ ಸಾಲ ಮನ್ನಾ ಮಾಡಲು ನಾವು ನೋಟು ಪ್ರಿಂಟ್ ಮಾಡುವ ಮಿಷನ್ ಇಟ್ಟುಕೊಂಡಿಲ್ಲ ಎಂದು ಎಚ್ ಡಿ ರೇವಣ್ಣ ಹೇಳಿದ್ದಕ್ಕೆ ರೈತ ಮುಖಂಡ ಚಾಮರಸ ಮಾಲಿ ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಒಂದೆಡೆ ಎಚ್ ಡಿ ರೇವಣ್ಣ ಈ ರೀತಿ ಹೇಳಿಕೆ ನೀಡಿದರೆ ಇನ್ನೊಂದೆಡೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ನಾವು ರೈತರ ಮೇಲೆ ಗೋಲಿಬಾರ್ ಮಾಡಿಲ್ಲ ಎಂದಿದ್ದರು. ಇವರಿಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಪಾಟೀಲ್ ನೀವೇನು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರಾ ಎಂದು ಕಿಡಿ ಕಾರಿದ್ದಾರೆ.

’20 ತಿಂಗಳು ಮುಖ್ಯಮಂತ್ರಿಯಾಗಿ, ಹಲವು ವರ್ಷ ಶಾಸಕರಾಗಿ ಅನುಭವ ಇರುವವರು ನೀವು. ನಿಮಗೆ ಘೋಷಣೆಗಳನ್ನು ಮಾಡುವಾಗ ಯೋಚನೆ ಇರಲಿಲ್ವಾ? ಆರ್ಥಿಕ ಪರಿಸ್ಥಿತಿ ಗೊತ್ತಿರಲಿಲ್ವಾ? ಈಗ ಘೋಷಣೆ ಮಾಡಿ ಈ ರೀತಿ ಹೇಳುತ್ತಿರುವುದೇಕೆ? ಪದೇ ಪದೇ ರೈತರ ಮೇಲೆ ಅವಮಾನಕರ ಹೇಳಿಕೆ ನೀಡುವುದು ಯಾಕೆ? ಒಬ್ಬ ಮುಖ್ಯಮಂತ್ರಿಯಾಗಿ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ಎನ್ನುವಂತಹ ಪದ ಪ್ರಯೋಗ ಶೋಭೆ ತರುವಂತದ್ದಲ್ಲ. ಇದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಿಯೇ ಮಾಡುತ್ತೇವೆ’ ಎಂದು ಚಾಮರಸ ಮಾಲಿ ಪಾಟೀಲ್ ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಮುಂದಿನ ಸುದ್ದಿ
Show comments