Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ವಿಕೋಪಕ್ಕೆ ತೆರಳಿದ ರೈತರ ಪ್ರತಿಭಟನೆ: ನಟ ಸುದೀಪ್ ಕಟೌಟ್ ಚಿಂದಿ

ಮಂಡ್ಯದಲ್ಲಿ ವಿಕೋಪಕ್ಕೆ ತೆರಳಿದ ರೈತರ ಪ್ರತಿಭಟನೆ: ನಟ ಸುದೀಪ್ ಕಟೌಟ್ ಚಿಂದಿ
ಮಂಡ್ಯ , ಬುಧವಾರ, 7 ಸೆಪ್ಟಂಬರ್ 2016 (12:20 IST)
ರಾಜ್ಯ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು ನಡೆಯುತ್ತಿರುವ ರೈತರ ಪ್ರತಿಭಟನೆ ವಿಕೋಪಕ್ಕೆ ತೆರಳಿದೆ.
 
ಪ್ರತಿಭಟನಾಕಾರರು ಅಂಗಡಿ ಮುಗ್ಗಟ್ಟುಗಳ ಮೇಲೆ ದಾಳಿ ನಡೆಸಿದ್ದಲ್ಲದೇ ಕೆಲವೆಡೆ ಕಲ್ಲು ತೂರಾಟ ನಡೆಸಿದ ಘಟನೆಗಳು ವರದಿಯಾಗಿವೆ. ರೈತರ ಶಾಂತಿಯುತ ಪ್ರತಿಭಟನೆ ಇಂದು ಹಿಂಸಾತ್ಮಕ ರೂಪ ಪಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
 
ನಗರದ ಚಿತ್ರಮಂದಿರದಲ್ಲಿ ಸುದೀಪ್ ಅಭಿನಯದ ಕೋಟಿಗೊಬ್ಬ ಚಿತ್ರ ಪ್ರದರ್ಶನವನ್ನೂ ತಡೆದ ಪ್ರತಿಭಟನಾಕಾರರು ಚಿತ್ರಮಂದಿರದ ಮುಂದಿದ್ದ ಬೃಹತ್ ಕಟೌಟ್‌ನ್ನು ಹರಿದು ಹಾಕಿ ಚಿಂದಿ ಉಡಾಯಿಸಿದರು.
 
ಪ್ರತಿಭಟನಾಕಾರರು ಅಂಗಡಿಗಳಲ್ಲಿರುವ ವಸ್ತುಗಳನ್ನು ರಸ್ತೆಗೆಸೆಯುತ್ತಿರುವುದನ್ನು ತಡೆಯಲು ಪ್ರಯತ್ನಿಸಿದ ಪೊಲೀಸರು ರೈತರ ಮೇಲೆ ಲಘು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯದಲ್ಲಿ ಅಂಗಡಿ, ಮುಂಗಟ್ಟು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು