Select Your Language

Notifications

webdunia
webdunia
webdunia
webdunia

ಶೀಘ್ರದಲ್ಲೇ ರೈತರಿಗೆ ಬೆಳೆ ಪರಿಹಾರ

ಶೀಘ್ರದಲ್ಲೇ ರೈತರಿಗೆ ಬೆಳೆ ಪರಿಹಾರ
ಬೆಂಗಳೂರು , ಬುಧವಾರ, 17 ನವೆಂಬರ್ 2021 (18:54 IST)
ಬೆಂಗಳೂರು ಟೆಕ್ ಸಮ್ಮಿಟ್ ( Bengaluru Tech Summit - BTS-2021) ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿಯನ್ನು ಸಮೀಕ್ಷೆ ಮಾಡಲಾಗುತ್ತಿದ್ದು, ಬೆಳೆ ಹಾನಿಯಿಂದ ತರಕಾರಿ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ಕಣ್ಣಿರಿಸಲಾಗಿದ್ದು, ಭತ್ತದ ಹಾಗೂ ಇತರೆ ಧಾನ್ಯಗಳ ಎಂ.ಎಸ್.ಪಿ ಖರೀದಿ ಕುರಿತು ಮಹತ್ವದ ಸಭೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ನಿಗಾ ಇಡಲಾಗಿದೆ ಎಂದರು.ಶೀಘ್ರಗಾಗಿ ಹಾಳಾಗುವ ವಸ್ತುಗಳ ಬಗ್ಗೆಯೂ ಸಂಪೂರ್ಣ ವರದಿ ಸಲ್ಲಿಸುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಗೆ ( Department of Agriculture ) ಸೂಚಿಸಿದೆ ಎಂದರು.
 
ಬೆಳೆ ಪರಿಹಾರದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ( Siddaramaiah ) ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಅವರು ಪತ್ರ ಬರೆಯುವ ಮೊದಲೇ ಬೆಳೆ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಲು ಎಲ್ಲ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೆವ್ವದ ಕಾಟ: ಕಾನ್ ಸ್ಟೇಬಲ್ ಆತ್ಮಹತ್ಯೆ