ಪರಿಹಾರಕ್ಕಾಗಿ ಉಳುಮೆ ಬಿಟ್ಟು ಕಂಬ ಕಾಯುತ್ತಿರುವ ರೈತರು

Webdunia
ಮಂಗಳವಾರ, 21 ಆಗಸ್ಟ್ 2018 (15:06 IST)
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ರೈತರು ಈಗಾಗಲೇ ತಮ್ಮ ಜಮೀನಿನಲ್ಲಿ ಬೆಳೆ ಬೆಳೆಯಲು ಜಮೀನನ್ನು ಹದ ಮಾಡಿ ಬಿತ್ತನೆ ಆರಂಭಿಸಿದ್ದಾರೆ. ಆದ್ರೆ ಆ ತಾಲೂಕಿನ  ರೈತರು ಉಳುಮೆಯನ್ನ ಬಿಟ್ಟು ಪ್ರತಿನಿತ್ಯ ಹೈ ಟೆನ್ಷನ್ ವಿದ್ಯುತ್ ಗೋಪುರಗಳನ್ನೇರಿ ಕುಳಿತು ಪ್ರತಿಭಟನೆ ನಡೆಸುವಂತಾಗಿದೆ.

ಪವರ್ ಗ್ರಿಡ್ ಎಂಬ ಸಂಸ್ಥೆಯು ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಹೊರವಲಯ ಆನೇಕಲ್ ನ ರೈತರ ಜಮೀನಿನಲ್ಲಿ ಹೈ ಟೆನ್ಷನ್ ಕಂಬಗಳನ್ನು ಹಾಕುವುದಕ್ಕೆ ಮುಂದಾಗಿದೆ. ಆದರೆ ರೈತರಿಗೆ ಸರಿಯಾದ ಪರಿಹಾರ ನೀಡಿಲ್ಲವೆಂದು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಲ್ಲೇ ಅಲ್ಲಿನ ರೈತರು ಬರುತ್ತಿದ್ದಾರೆ.

ಆನೇಕಲ್ ತಾಲೂಕಿನ ಕಾಳನಾಯಕನಹಳ್ಳಿ, ವಣಕನಹಳ್ಳಿ ಸುತ್ತಮುತ್ತಲಿನ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪವರ್ ಗ್ರಿಡ್ ಕಂಪನಿಯವರು ಮಾತ್ರ ಪೊಲೀಸರ ರಕ್ಷಣೆಯಲ್ಲಿ ರೈತರ ಜಮೀನಿನಲ್ಲಿ ಮತ್ತೆ ಕಾಮಗಾರಿಯನ್ನು ಆರಂಭಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ  ರೈತರು ವಿದ್ಯುತ್ ಗೋಪುರ ಏರಿ ಪ್ರತಿಭಟನೆ ನಡೆಸಿದ್ದು, ರೈತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಎ. ನಾರಾಯಣ ಸ್ವಾಮಿ ಆಗಮಿಸಿ ಬೆಂಬಲ ಸೂಚಿಸಿದ್ರು. ಕೊನೆಗೆ ಪೊಲೀಸರು ಮಾಜಿ ಸಚಿವರನ್ನು ಸೇರಿದಂತೆ 150ಕ್ಕೂ ಹೆಚ್ಚು ರೈತರನ್ನು ಬಂಧಿಸಿ ಕರೆದೊಯ್ದರು. ಆ ಬಳಿಕ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ‌ ಸಚಿವ ಎ.ನಾರಾಯಣಸ್ವಾಮಿ, ರೈತರಿಗೆ ಕೂಡಲೇ ಸರಿಯಾದ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದ ಜೊತೆ ಸಿಎಂ ಮಾತನಾಡದೆ ಹೋದರೆ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments