ಪರಿಹಾರಕ್ಕಾಗಿ ಉಳುಮೆ ಬಿಟ್ಟು ಕಂಬ ಕಾಯುತ್ತಿರುವ ರೈತರು

Webdunia
ಮಂಗಳವಾರ, 21 ಆಗಸ್ಟ್ 2018 (15:06 IST)
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ರೈತರು ಈಗಾಗಲೇ ತಮ್ಮ ಜಮೀನಿನಲ್ಲಿ ಬೆಳೆ ಬೆಳೆಯಲು ಜಮೀನನ್ನು ಹದ ಮಾಡಿ ಬಿತ್ತನೆ ಆರಂಭಿಸಿದ್ದಾರೆ. ಆದ್ರೆ ಆ ತಾಲೂಕಿನ  ರೈತರು ಉಳುಮೆಯನ್ನ ಬಿಟ್ಟು ಪ್ರತಿನಿತ್ಯ ಹೈ ಟೆನ್ಷನ್ ವಿದ್ಯುತ್ ಗೋಪುರಗಳನ್ನೇರಿ ಕುಳಿತು ಪ್ರತಿಭಟನೆ ನಡೆಸುವಂತಾಗಿದೆ.

ಪವರ್ ಗ್ರಿಡ್ ಎಂಬ ಸಂಸ್ಥೆಯು ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಹೊರವಲಯ ಆನೇಕಲ್ ನ ರೈತರ ಜಮೀನಿನಲ್ಲಿ ಹೈ ಟೆನ್ಷನ್ ಕಂಬಗಳನ್ನು ಹಾಕುವುದಕ್ಕೆ ಮುಂದಾಗಿದೆ. ಆದರೆ ರೈತರಿಗೆ ಸರಿಯಾದ ಪರಿಹಾರ ನೀಡಿಲ್ಲವೆಂದು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಲ್ಲೇ ಅಲ್ಲಿನ ರೈತರು ಬರುತ್ತಿದ್ದಾರೆ.

ಆನೇಕಲ್ ತಾಲೂಕಿನ ಕಾಳನಾಯಕನಹಳ್ಳಿ, ವಣಕನಹಳ್ಳಿ ಸುತ್ತಮುತ್ತಲಿನ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪವರ್ ಗ್ರಿಡ್ ಕಂಪನಿಯವರು ಮಾತ್ರ ಪೊಲೀಸರ ರಕ್ಷಣೆಯಲ್ಲಿ ರೈತರ ಜಮೀನಿನಲ್ಲಿ ಮತ್ತೆ ಕಾಮಗಾರಿಯನ್ನು ಆರಂಭಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ  ರೈತರು ವಿದ್ಯುತ್ ಗೋಪುರ ಏರಿ ಪ್ರತಿಭಟನೆ ನಡೆಸಿದ್ದು, ರೈತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಎ. ನಾರಾಯಣ ಸ್ವಾಮಿ ಆಗಮಿಸಿ ಬೆಂಬಲ ಸೂಚಿಸಿದ್ರು. ಕೊನೆಗೆ ಪೊಲೀಸರು ಮಾಜಿ ಸಚಿವರನ್ನು ಸೇರಿದಂತೆ 150ಕ್ಕೂ ಹೆಚ್ಚು ರೈತರನ್ನು ಬಂಧಿಸಿ ಕರೆದೊಯ್ದರು. ಆ ಬಳಿಕ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ‌ ಸಚಿವ ಎ.ನಾರಾಯಣಸ್ವಾಮಿ, ರೈತರಿಗೆ ಕೂಡಲೇ ಸರಿಯಾದ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದ ಜೊತೆ ಸಿಎಂ ಮಾತನಾಡದೆ ಹೋದರೆ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments