Webdunia - Bharat's app for daily news and videos

Install App

ಕಲಬುರಗಿ ಕ್ಷೇತ್ರದ ಸಂಸದ ಹಾಗೂ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು

Webdunia
ಶನಿವಾರ, 15 ಫೆಬ್ರವರಿ 2020 (10:44 IST)
ಕಲಬುರಗಿ : ರೈತರ ಮತಬೇಕು, ಆದ್ರೆ ಅವರ  ಸಮಸ್ಯೆಗಳು ಮಾತ್ರ ಬೇಡ ಎಂದು ತಮ್ಮ ಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಲಬುರಗಿ ಕ್ಷೇತ್ರದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ರೈತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಆಲ್ಲೂರು ಗ್ರಾಮದಲ್ಲಿ ಬಹುತೇಕ ರೈತರ ಜಮೀನು ಗುಡ್ಡದ ಮೇಲಿನ ಪ್ರದೇಶದಲ್ಲಿದೆ. ಹೀಗಾಗಿ ಜಮೀನುಗಳಿಗೆ ಹೋಗಲು, ರಸ್ತೆಯಿಲ್ಲದೆ ಕೃಷಿ ಮಾಡಲು ಸಾಧ್ಯವಾಗದೆ  ಪರದಾಡುತ್ತಿದ್ದಾರೆ. ರಸ್ತೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಸ್ಪಂದಿಸದಿರುವ ಹಿನ್ನಲೆ ಸ್ವಂತ ಹಣದಿಂದಲೇ ರಸ್ತೆ ನಿರ್ಮಾಣ ಮಾಡುಲು ರೈತರು ಮುಂದಾಗಿದ್ದಾರೆ.


ರಸ್ತೆ ನಿರ್ಮಾಣಕ್ಕೆ 80 ಸಾವಿರ ರೂ. ಸಂಗ್ರಹಿಸಿರುವ ರೈತರು, ಗುಡ್ಡ ಕೊರೆದು, ಕಲ್ಲುಗಳನ್ನು ತೆಗೆದು ಈಗಾಗಲೇ 2 ಕಿಲೋ ಮೀಟರ್ ರಸ್ತೆ ನಿರ್ಮಿಸಿದ್ದಾರೆ. ಇನ್ನೂ 4-5ಕಿ.ಮೀ. ರಸ್ತೆ ನಿರ್ಮಾಣಕ್ಕೆ ರೈತರು  ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments