Publish Date: Wed, 01 Nov 2023 (18:03 IST)
Updated Date: Wed, 01 Nov 2023 (19:06 IST)
ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಿರುವ ಬೆಳೆ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ.
ನಮ್ಮ ಅರ್ಜಿಯನ್ನು ಪ್ರಾಧಿಕಾರ ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ಕೂಡ ಪ್ರಾಧಿಕಾರದ ಆದೇಶವನ್ನೇ ಎತ್ತಿಹಿಡಿದಿದೆ. ಈಗಿರುವ ಮುಂಗಾರು ಬೆಳೆಯನ್ನ ಹೇಗಾದರೂ ಮಾಡಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.