ಸಂಘದ ನೂತನ ಸದಸ್ಯತ್ವಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Webdunia
ಶನಿವಾರ, 8 ಜೂನ್ 2019 (17:46 IST)
ಬಳ್ಳಾರಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೀರಶೈವ ವಿದ್ಯಾವರ್ಧಕ ಸಂಘದಲ್ಲಿ ನೂತನ ಸದಸ್ಯತ್ವ ನೀಡಬೇಕೆಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮುಂದುವರಿದಿದೆ.

ಸಂಘದ ಕಚೇರಿ ಮುಂದೆ  ನೂತನ ಸದಸ್ಯತ್ವ ಹೋರಾಟ ಸಮಿತಿಯ ಕಾರ್ಯಕರ್ತರು, ಮುಖಂಡರು ನಡೆಸಿರುವ  ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟ ಸಮಿತಿಯ ಸಂಚಾಲಕ ಮೀನಳ್ಳಿ ಚಂದ್ರಶೇಖರ್, ಸಂಘದ ಆಜೀವ ಸದಸ್ಯ ಮಹಾಲಿಂಗಯ್ಯ(ರಾಜಣ್ಣ)ಅಂಗಡಿ ಶಂಕರ್, ಹೊನ್ನನಗೌಡ,  ಬಿ.ಡಿ.ಗೌಡ ಮೊದಲಾದವರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ನೂತನ ಸದಸ್ಯತ್ವ ನೀಡಿ ಎಂದು ಹೋರಾಟ ಮಾಡುತ್ತಾ ಬಂದರೂ ಆಡಳಿತಕ್ಕೆ ಬರುವ  ಸಂಘದ ಪದಾಧಿಕಾರಿಗಳು ಇಂದು ನಾಳೆ ಎನ್ನುತ್ತಲೇ ಬಂದಿದ್ದಾರೆ. ಈ ಕುರಿತು ಗಮನ ಹರಿಸುತ್ತಿಲ್ಲ.

ಬೈಲಾ ಪ್ರಕಾರ ಒಬ್ಬರು  ಸದಸ್ಯತ್ವ ಪಡೆಯಲು  5 ಸಾವಿರ ನೀಡಬೇಕಿದ್ದು ಅದರಂತೆ ಹೋರಾಟ ಸಮಿತಿ 334 ಜನರಿಂದ ಹಣ ಸಂಗ್ರಹಿಸಿ ಅದರ ಮೊತ್ತದ ಡಿಡಿಯನ್ನು ಸಂಘಕ್ಕೆ ನೀಡಿದೆ.

ನಾಳೆ ನಡೆಯುವ ವೀ.ವಿ.ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಸದಸ್ಯತ್ವ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಮಿತಿಯು ಹಗಲು ರಾತ್ರಿ ನಿರಂತರವಾಗಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದು. ಆಗ ಸಂಭವಿಸುವ ಅನಾಹುತಗಳಿಗೆ ಸಂಘವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments