ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ!

Webdunia
ಮಂಗಳವಾರ, 5 ಜುಲೈ 2022 (11:56 IST)
ಬೆಂಗಳೂರು : ಸ್ಕೂಲ್ಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿಲ್ಲ ಅಂತ ವಿದ್ಯಾರ್ಥಿ ಮೇಲೆ ಶಿಕ್ಷಕ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿಕ್ಷಕನಿಂದ ಹೊಡೆತಕ್ಕೆ ಒಳಗಾದ ವಿದ್ಯಾರ್ಥಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಂಗಳೂರಿನ ಮೂಡಲಪಾಳ್ಯದ ಖಾಸಗಿ ಶಾಲೆ ಬ್ಲೂ ಬೆಲ್ ಪಬ್ಲಿಕ್ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಳೆದ ಶುಕ್ರವಾರ ಈತ ಶಾಲೆಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿರಲಿಲ್ಲ. ಇದಕ್ಕೆ ಸಿಟ್ಟಾದ ಗಣಿತ ಶಿಕ್ಷಕ ಮಾದೇಶ್ ತನ್ಮಯ್ಗೆ ಥಳಿಸಿದ್ದಾರೆ.

ಶಿಕ್ಷಕನ ಹೊಡೆತಕ್ಕೆ ಕೆನ್ನೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ತನ್ಮಯ್ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಆರ್ಟಿಇ ಅಡಿಯಲ್ಲಿ ದಾಖಲಾದ ಮಗು ಎಂಬ ಕಾರಣಕ್ಕೆ ಶಿಕ್ಷಕ ಮಗನಿಗೆ ಈ ರೀತಿ ಹೊಡೆದಿದ್ದಾನೆ ಎಂಬ ಆರೋಪ ಹಿನ್ನೆಲೆ ಪ್ರಶ್ನಿಸಲು ಹೋದ ಪೋಷಕರಿಗೆ ಶಾಲೆಯವರು ಉಡಾಫೆ ಉತ್ತರ ನೀಡಿದ್ದಾರೆ. ಅಲ್ಲದೇ ಶಾಲೆಯ ಪ್ರಾಂಶುಪಾಲ ರಾಜೇಶ್ ಪೋಷಕರಿಗೆ ಧಮ್ಕಿ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments