ಅಪ್ಪ ಬಿಜೆಪಿ ಮಗ ಕಾಂಗ್ರೆಸ್ ...!!!

Webdunia
ಮಂಗಳವಾರ, 23 ನವೆಂಬರ್ 2021 (20:39 IST)
ಮಾಜಿ ಶಾಸಕ ಎ. ಮಂಜು ಅವರ ಪುತ್ರ ಡಾ. ಮಂಥರ್ ಗೌಡಗೆ ಕಾಂಗ್ರೆಸ್ ವಿಧಾನಪರಿಷತ್‌ ಕೊಡಗು ಕ್ಷೇತ್ರಕ್ಕೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎ. ಮಂಜು ಅವರಿಗೆ ನೀಡಲಾಗಿದ್ದ ಪಕ್ಷದ ಎಲ್ಲ ಜವಾಬ್ದಾರಿಗಳನ್ನು ಬಿಜೆಪಿ ವಾಪಸ್ ಪಡೆದುಕೊಂಡಿದೆ.
 
ಬಿಜೆಪಿ ರಾಜ್ಯ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದ್ದು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ಹಿಂದೆ ಕಾಂಗ್ರೆಸ್‌ನಲ್ಲಿದ್ದ ಎ. ಮಂಜು ಅವರು ನಂತರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರಿಗೆ ಮಂಡ್ಯ ಜಿಲ್ಲೆಯ ಬಿಜೆಪಿ ಪ್ರಭಾರಿ ಸೇರಿದಂತೆ ಮತ್ತಿತರ ಜವಾಬ್ದಾರಿಗಳನ್ನು ನೀಡಲಾಗಿತ್ತು.
 
ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅವರ ಪುತ್ರ ಡಾ. ಮಂಥರ್ ಗೌಡ ಅವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ನೀಡಲಾಗಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡ ಸ್ಪರ್ಧೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದೆ.
 
ಇತ್ತೀಚಿನ ಬೆಳವಣಿಗೆಯಿಂದ ಕೆಲವು ಸಂಶಯಗಳು ಉಂಟಾಗಿವೆ. ಈ ಕಾರಣದಿಂದ ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ ಹಾಗೂ ಮತ್ತುಳಿದ ಎಲ್ಲ ಜವಾಬ್ದಾರಿಗಳಿಂದ ಎ. ಮಂಜು ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಶಿಸ್ತು ಸಮಿತಿ ಆದೇಶದ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments