Webdunia - Bharat's app for daily news and videos

Install App

ಅಪ್ಪ ಬಿಜೆಪಿ ಮಗ ಕಾಂಗ್ರೆಸ್ ...!!!

Webdunia
ಮಂಗಳವಾರ, 23 ನವೆಂಬರ್ 2021 (20:39 IST)
ಮಾಜಿ ಶಾಸಕ ಎ. ಮಂಜು ಅವರ ಪುತ್ರ ಡಾ. ಮಂಥರ್ ಗೌಡಗೆ ಕಾಂಗ್ರೆಸ್ ವಿಧಾನಪರಿಷತ್‌ ಕೊಡಗು ಕ್ಷೇತ್ರಕ್ಕೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎ. ಮಂಜು ಅವರಿಗೆ ನೀಡಲಾಗಿದ್ದ ಪಕ್ಷದ ಎಲ್ಲ ಜವಾಬ್ದಾರಿಗಳನ್ನು ಬಿಜೆಪಿ ವಾಪಸ್ ಪಡೆದುಕೊಂಡಿದೆ.
 
ಬಿಜೆಪಿ ರಾಜ್ಯ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದ್ದು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ಹಿಂದೆ ಕಾಂಗ್ರೆಸ್‌ನಲ್ಲಿದ್ದ ಎ. ಮಂಜು ಅವರು ನಂತರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರಿಗೆ ಮಂಡ್ಯ ಜಿಲ್ಲೆಯ ಬಿಜೆಪಿ ಪ್ರಭಾರಿ ಸೇರಿದಂತೆ ಮತ್ತಿತರ ಜವಾಬ್ದಾರಿಗಳನ್ನು ನೀಡಲಾಗಿತ್ತು.
 
ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅವರ ಪುತ್ರ ಡಾ. ಮಂಥರ್ ಗೌಡ ಅವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ನೀಡಲಾಗಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡ ಸ್ಪರ್ಧೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದೆ.
 
ಇತ್ತೀಚಿನ ಬೆಳವಣಿಗೆಯಿಂದ ಕೆಲವು ಸಂಶಯಗಳು ಉಂಟಾಗಿವೆ. ಈ ಕಾರಣದಿಂದ ಪಕ್ಷದ ಮಂಡ್ಯ ಜಿಲ್ಲೆಯ ಪ್ರಭಾರಿ ಹಾಗೂ ಮತ್ತುಳಿದ ಎಲ್ಲ ಜವಾಬ್ದಾರಿಗಳಿಂದ ಎ. ಮಂಜು ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಶಿಸ್ತು ಸಮಿತಿ ಆದೇಶದ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments