Webdunia - Bharat's app for daily news and videos

Install App

ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

Webdunia
ಮಂಗಳವಾರ, 9 ಫೆಬ್ರವರಿ 2016 (17:50 IST)
35 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಅದೃಷ್ಟವಶಾತ್‌ ನಾಲ್ಕು ವರ್ಷದ ಮಗನನ್ನು ಸ್ಥಳೀಯರು ರಕ್ಷಿಸಿದ್ದು, ತಂದೆ ಮತ್ತು ಮಗಳು ಸಾವನ್ನಪ್ಪಿದ್ದಾರೆ. 

ಹೆಚ್.ಡಿ.ಕೋಟೆ ತಾಲೂಕಿನ ಉದ್ಬೂರು ಸಮೀಪದ ದಡದಹಳ್ಳಿ ಕೆರೆಯಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 38 ವರ್ಷದ ರಾಜು ಮತ್ತು 9 ವರ್ಷದ ಪುತ್ರಿ ಸ್ಪೂರ್ತಿ ಎಂದು ಗುರುತಿಸಲಾಗಿದೆ. ಸಾವನ್ನು ಗೆದ್ದು ಬಂದ ಹುಡುಗನನ್ನು 4 ವರ್ಷದ ಸೃಜನ್ ಎಂದು ಗುರುತಿಸಲಾಗಿದೆ. 
 
ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಜತೆಗೆ ರಾಜು ಅವರ ಮನೆಯ ಬಳಿ ಇತ್ತೀಚಿಗೆ ಯಾರೋ ವಾಮಾಚಾರ ಮಾಡಿರುತ್ತಿದ್ದು, ಅದಕ್ಕಾಗಿ ಅವರು ಬಹಳ ಬೇಸರ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. 
 
ಅಗ್ನಿಶಾಮಕ ಸಿಬ್ಬಂದಿ ಮೃತರ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments