Webdunia - Bharat's app for daily news and videos

Install App

ಸೊಸೆಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಮಾವ

Webdunia
ಬುಧವಾರ, 4 ಮಾರ್ಚ್ 2015 (11:34 IST)
ಸೊಸೆಯ ಶೀಲ ಶಂಕಿಸಿ ದಿವ್ಯಾ ಎಂಬವಳನ್ನು ಮಾವನೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಸಂಭವಿಸಿದೆ.

ಮಾವ ಕೃಷ್ಣಪ್ಪ (58) ಸೊಸೆಯ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಅವಳ ಜೊತೆ ವಾಗ್ವಾದಕ್ಕೆ ಇಳಿದ. ಮಾತಿಗೆ ಮಾತು ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಮಚ್ಚನ್ನೆತ್ತಿಕೊಂಡು ಸೊಸೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕೃಷ್ಣಪ್ಪ ಅವರ ಪುತ್ರ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಘಟನೆ ಕೇಳಿ ಊರಿಗೆ ಧಾವಿಸಿದರು.

ಸೊಸೆಯ ಬಗ್ಗೆ ಅನುಮಾನಗೊಂಡಿದ್ದ ಮಾವ ಅವಳ ಜೊತೆ ವಾಗ್ವಾದಕ್ಕಿಳಿದಾಗ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿತ್ತು. ಸೊಸೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಮಾವ ಶಂಕಿತಗೊಂಡಿದ್ದ. ಆದರೆ ಸೊಸೆ ಅದನ್ನು ಒಪ್ಪಲು ತಯಾರಿಲ್ಲದೇ ಮಾವನ ಜೊತೆ ಜಗಳಕ್ಕೆ ಇಳಿದಿದ್ದು ಅವನಿಗೆ ಕೋಪ ತರಿಸಿತು. ಕೂಡಲೇ ಅಲ್ಲೆ ಇದ್ದ ಮಚ್ಚನ್ನು ಎತ್ತಿಕೊಂಡು ಬರ್ಬರವಾಗಿ ಸೊಸೆಯನ್ನು ಹತ್ಯೆ ಮಾಡಿದ. ಪೊಲೀಸರು ಕೃಷ್ಣಪ್ಪ ಅವರನ್ನು ಬಂಧಿಸಿ ಹೆಚ್ಚಿನ ತನಿೆಕೆ  ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments