ವಿದ್ಯುತ್ ತಗುಲಿ ತಂದೆ, ಮಗ ಸಾವು

Webdunia
ಶನಿವಾರ, 2 ಸೆಪ್ಟಂಬರ್ 2023 (18:00 IST)
ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ಮನೆ ಮುಂದಿನ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಪ್ರಭು ಹುಂಬಿ ಹಾಗೂ ಇವರ ಪುತ್ರ ಮಂಜುನಾಥ ಮೃತಪಟ್ಟವರು. ಮನೆ ಮುಂದಿನ‌ ವಿದ್ಯುತ್ ಕಂಬಕ್ಕೆ ಬ್ಯಾಲೆನ್ಸಿಗೆ ಹಾಕಲಾಗಿದ್ದ ತಂತಿಗೆ ಮೇನ್ ಲೈನ್ ವಿದ್ಯುತ್ ತಂತಿ ಜೋಡಿಸಲಾಗಿತ್ತು. ತಂತಿ ಸುತ್ತ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ಪ್ರಭು ಹುಂಬಿ ಅವರಿಗೆ ವಿದ್ಯುತ್ ತಗುಲಿದೆ. ಒದ್ದಾಡುತ್ತಿದ್ದ ಅವರನ್ನು ನೋಡಿ ಓಡಿ ಬಂದು ಪುತ್ರ ಮಂಜುನಾಥ ತಂದೆಯನ್ನು ಕಾಪಾಡಲು ಮುಂದಾದರು. ಅವರಿಗೂ ವಿದ್ಯುತ್ ತಗುಲಿದ್ದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಭು ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುನಾಥ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು. ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ಆವರಿಸಿದೆ. ಮೃತರ ಕುಟುಂಬದವರ ಆಕ್ರಂದನ‌ ಮುಗಿಲು ಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments