Select Your Language

Notifications

webdunia
webdunia
webdunia
webdunia

ಹೆಣ್ಣು ಮಗು ಹುಟ್ಟಿದ್ದಕ್ಕೆ ಅಪ್ಪ ಹೀಗಾ ಮಾಡೋದು

ಹೆಣ್ಣು ಮಗು ಹುಟ್ಟಿದ್ದಕ್ಕೆ ಅಪ್ಪ ಹೀಗಾ ಮಾಡೋದು
ಚಿಕ್ಕಮಗಳೂರು , ಶನಿವಾರ, 12 ಸೆಪ್ಟಂಬರ್ 2020 (08:09 IST)
ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ 7 ತಿಂಗಳ ಕಂದಮ್ಮನನ್ನು ತಂದೆಯೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲಯ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ.

ಉಮಾಶಂಕರ್ ಮಗುವನ್ನು ಕೊಂದ ಪಾಪಿ ತಂದೆ. ಈತ ವೃತ್ತಿಯಲ್ಲಿ ವಕೀಲನಾಗಿದ್ದು, ಮಂಜುಳ ಎಂಬಾಕೆಯನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದನು. ಮಂಜುಳ 7 ತಿಂಗಳ ಹಿಂದೆ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹೆಣ್ಣಾಗಿದೆ ಎಂದು ಮಂಜುಳಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಈ ಪಾಪಿ ಮಂಜುಳ ಕೆಲಸಕ್ಕೆ ಹೋದ ವೇಳೆ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮಂಜುಳ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಸ್ತುವಾರಿಗೆ ಕೋಕ್