Webdunia - Bharat's app for daily news and videos

Install App

ಹೆಣ್ಣು ಮಗುವನ್ನು 15 ಸಾವಿರ ರೂಪಾಯಿಗೆ ಮಾರಾಟ ಮಾಡಿದ ತಂದೆ!

Webdunia
ಸೋಮವಾರ, 26 ಫೆಬ್ರವರಿ 2018 (07:25 IST)
ಚಿಂಚೋಳಿ: ತಾಲ್ಲೂಕಿನ ಚಂದು ನಾಯಕ ತಾಂಡಾದಲ್ಲಿ ಹೆಣ್ಣು ಮಗುವಿನ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಮಧ್ಯವರ್ತಿಯಾಗಿದ್ದ ಆಶಾ ಕಾರ್ಯಕರ್ತೆ ಸೇರಿ ಐದು ಮಂದಿಯನ್ನು ಕುಂಚಾವರಂ ಪೊಲೀಸರು ಬಂಧಿಸಿದ್ದಾರೆ.
ಅನುಸೂಯಾ, ರಾಮಚಂದ್ರ ದಂಪತಿಗೆ ಜ.9ರಂದು ನಾಲ್ಕನೇ ಮಗು ಜನಿಸಿತು. ಅದು ಹೆಣ್ಣು ಆಗಿದ್ದರಿಂದ ಮನೆಗೆ ತಂದರೆ ಕೊಲ್ಲುವುದಾಗಿ ಪತಿಯು ಪತ್ನಿಗೆ ಎಚ್ಚರಿಕೆ ನೀಡಿದ್ದ ಎಂದು ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.



ಮಗುವನ್ನು ಕೊಲ್ಲುವುದು ಬೇಡ. ಬೇರೆಯವರಿಗೆ ಸಾಕಲು ನೀಡಬಹುದು ಎಂಬ ಸಲಹೆಯ ಮೇರೆಗೆ ಫೆ. 8ರಂದು ಆಶಾ ಕಾರ್ಯಕರ್ತೆ ಸುವರ್ಣಾ ಮೂಲಕ ವ್ಯವಹಾರ ಕುದುರಿಸಿ 15 ಸಾವಿರ ರೂಪಾಯಿಗೆ ಟಿ.ಪೌಲ್‌ ದಂಪತಿಗೆ ಮಗುವನ್ನು ಮಾರಾಟ ಮಾಡಿದ್ದ.


ಮಗು ಆರೋಗ್ಯವಾಗಿದ್ದು, ಅದನ್ನು ಕಲಬುರ್ಗಿಯ ಅಮೂಲ್ಯ ಶಿಶುಗೃಹಕ್ಕೆ ದಾಖಲಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣ್ಣ ಸಿರಸಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments