Select Your Language

Notifications

webdunia
webdunia
webdunia
webdunia

ಪಂಚಾಯತ್ ಕಚೇರಿಯಲ್ಲೇ ನೇಣಿಗೆ ಶರಣಾದ ಎಫ್‌ಡಿಎ

ಪಂಚಾಯತ್ ಕಚೇರಿಯಲ್ಲೇ ನೇಣಿಗೆ ಶರಣಾದ ಎಫ್‌ಡಿಎ
ಶಿವಮೊಗ್ಗ , ಸೋಮವಾರ, 20 ಅಕ್ಟೋಬರ್ 2014 (11:47 IST)
ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಸೇವೆ ಸಲ್ಲಿಸುತ್ತಿದ್ದ  ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿಯೇ ನೇಣಿಗೆ ಶರಣಾದ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ನಡೆದಿದೆ. 

ಮೃತ ವ್ಯಕ್ತಿಯನ್ನು 55 ವರ್ಷದ ಯುವರಾಜ್ ನಾಯಕ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ  ಈ ಘಟನೆ ನಡೆದಿದೆ.
 
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಅವರ ಕಾರ್ಯವೈಖರಿಯ ಬಗ್ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದರಿಂದ ನೊಂದಿದ್ದ ನೌಕರ ಈ ಕೃತ್ಯಕ್ಕೆ ಕೈ ಹಾಕಿರಬಹುದು ಎಂದು ಭಾವಿಸಲಾಗಿದೆ.
 
ಕಳೆದ ಎರಡು ತಿಂಗಳ ಹಿಂದೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರವನ್ನು ವಹಿಸಿಕೊಂಡಿರುವ ವಿ.ಪಿ. ಇಕ್ಕೇರಿ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡುತ್ತಿದ್ದು, ನಿನ್ನೆ ಸೊರಬ ತಾಲ್ಲೂಕು ಪಂಚಾಯತ್‌ಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದ್ದರು. ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂಬ ಕಾರಣಕ್ಕೆ ಅವರು ಕಚೇರಿಯ ಕೆಲ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಯುವರಾಜ್ ಅವರಿಗೆ ಸಹ ಡಿಸಿಯವರು ಸರಿಯಾಗಿ ಕೆಲಸ ನಿರ್ವಹಿಸುವಂತೆ ತಾಕೀತು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಅದರಿಂದ  ಬೇಸರಗೊಂಡ ಅವರು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ. 
 
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Share this Story:

Follow Webdunia kannada