Select Your Language

Notifications

webdunia
webdunia
webdunia
webdunia

ಚನ್ನಪಟ್ಟಣಕ್ಕೆ ಡಿಕೆಶಿ ಬರುತ್ತಿರುವುದು ಭಯವಾಗುತ್ತಿದೆ: ಸಿಪಿ ಯೋಗೇಶ್ವರ್

Vidhanasabhe Election 2024

Sampriya

ರಾಮನಗರ , ಗುರುವಾರ, 20 ಜೂನ್ 2024 (20:42 IST)
Photo Courtesy X
ರಾಮನಗರ: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಚನ್ನಪಟ್ಟಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರುತ್ತಿರುವುದು ಭಯವಾಗುತ್ತಿದೆ ಎಂದು  ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಚನ್ನಪಟ್ಟಣಕ್ಕೆ ಬಂದಿರುವ ಡಿಕೆ ಶಿವಕುಮಾರ್ ಅವರು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿ, ಬೆದರಿಕೆ ಹಾಕಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬರ್ತಿದ್ದಾರೆ. ಅವರಿಗೆ ತುಂಬು ಹೃದಯದ ಸ್ವಾಗತ. ಯಾವುದೇ ಚುನಾವಣೆಯಲ್ಲಿ ಸ್ಪರ್ಧೆಗೆ ಪ್ರತಿಸ್ಪರ್ಧೆ ಮುಖ್ಯ. ಹಾಗಾಗಿ, ಅವರ ಸ್ಪರ್ಧೆಯನ್ನ ಸ್ವಾಗತಿಸುತ್ತೇವೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸಹೋದರ ಡಿಕೆ ಸುರೇಶ್ ಅವರ ಸೋಲು ಡಿಕೆಶಿ ಹತಾಶೆ ತಂದಿದ್ದು, ಅದನ್ನು ಸರಿದೂಗಿಸಲು ವಾಮಾಮಾರ್ಗದಲ್ಲಿ ಅಧಿಕಾರ ಹಿಡಿಯಲು ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಅವಧಿ ಮೀರಿದ ಗಾಡಿ ಬೇಕಾಬಿಟ್ಟಿ ಪಾರ್ಕ್‌ ಮಾಡಿದ್ದಲ್ಲಿ ವಶಕ್ಕೆ