ರಾಜ್ಯದಲ್ಲಿ ಮಂಗನ ಕಾಯಿಲೆ ಆತಂಕ!

geetha
ಭಾನುವಾರ, 11 ಫೆಬ್ರವರಿ 2024 (21:00 IST)
ಬೆಂಗಳೂರು :ಕಳೆದ ಒಂದು ತಿಂಗಳಲ್ಲಿ 3157 ಮಂದಿಗೆ ಮಂಗನ ಕಾಯಿಲೆ  ಪರೀಕ್ಷೆ ನಡೆಸಲಾಗಿದ್ದು 76 ಮಂದಿಗೆ ಸೋಂಕು ತಗುಲಿರುವುದು ಸ್ಪಷ್ಟವಾಗಿತ್ತು. ಕಳೆದ 24 ಗಂಟೆಯಲ್ಲಿ 6 ಮಂದಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವುದು ಮತ್ತೆ ಆತಂಕ ಸೃಷ್ಟಿಸಿದೆ. ಒಟ್ಟಾರೆ ಪರೀಕ್ಷೆಗೊಳಗಾದ 145 ಮಂದಿಯಲ್ಲಿ 6 ಮಂದಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. 
 
 ರಾಜ್ಯದಲ್ಲಿ 21 ಸಕ್ರಿಯ ಪ್ರಕರಣಗಳು ಇದ್ದು, ಆರೋಗ್ಯ ಇಲಾಖೆ ಸೂಚಿಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಪಟ್ಟಿ ನೀಡಿದೆ.
 
ಕಾಡು, ತೋಟದಿಂದ ಬಂದ ನಂತರ ಬಿಸಿ ನೀರಿನಲ್ಲಿ ಸ್ನಾನ ಮಾಡುವುದು
 
ಧರಿಸಿದ ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಸೋಪಿನಿಂದಾ ತೊಳೆಯುವುದು

ಕಾಡಿಗೆ ಹೋಗುವಾಗ ಸುರಕ್ಷತೆಗಾಗಿ ಮೈ ತುಂಬ ಬಟ್ಟೆ ಧರಿಸುವುದು
 
ಕಾಡು ಅಥವಾ ತೋಟಕ್ಕೆ ಹೋಗುವಾಗ DEPA ಉಣ್ಣೆ ವಿಕರ್ಷಕ ತೈಲ ಲೇಪಿಸಿಕೊಳ್ಳುವುದು
 
ಕಾಡಿನಿಂದ ಮನೆಗೆ ಉಣ್ಣೆ ಬರದಂತೆ ಸುರಕ್ಷತಾ ಕ್ರಮವಹಿಸಬೇಕು
 
ಜಾನುವಾರುಗಳ ಮೈಯಿಂದ ಉಣ್ಣೆ ತೆಗೆದು,ಉಣ್ಣೆ ನಿವಾರಕ ತೈಲ ಲೇಪಿಸಬೇಕು. ಉಣ್ಣೆ ನಿವಾರಕ ತೈಲವನ್ನು ಕೊಟ್ಟಿಗೆ ಹಾಗೂ ಸುತ್ತಮುತ್ತ ಸಿಂಪಡಿಬೇಕು
 
ಮಂಗಗಳು ಸತ್ತಿರುವುದು ಕಂಡು ಬಂದರೆ ಗ್ರಾಮ ಪಂಚಾಯತಿ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments