Webdunia - Bharat's app for daily news and videos

Install App

ಖಾಸಗಿ ವೀಡಿಯೋ ಬಹಿರಂಗದ ಭೀತಿ : ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ!

Webdunia
ಶನಿವಾರ, 19 ಆಗಸ್ಟ್ 2023 (08:57 IST)
ಚಿಕ್ಕೋಡಿ : ಖಾಸಗಿ ವೀಡಿಯೋ ವಿಚಾರ ಬಹಿರಂಗವಾಗುವ ಭೀತಿಯಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ರಾಯಬಾಗದ ಹಾರೂಗೇರಿ ಪಟ್ಟಣದ ಹೊರವಲಯದ ಬಡಬ್ಯಾಕೂಡ್ನಲ್ಲಿ ನಡೆದಿದೆ.

ಅಕ್ಬರ್ ಜಮಾದಾರ್ (21) ಕೊಲೆಯಾದ ದುರ್ದೈವಿ. ಬಸ್ತವಾಡ ಹೊರವಲಯ ಅರಣ್ಯ ಪ್ರದೇಶದಲ್ಲಿ ಯುವಕನನ್ನು ಕೊಲೆ ಮಾಡಲಾಗಿದೆ. ಬಡಬ್ಯಾಕೂಡ್ನ ಮಹಾಂತೇಶ ಪೂಜಾರ್ (23) ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆಯಾದ ಅಕ್ಬರ್ ಹಾಗೂ ಹಂತಕ ಮಹಾಂತೇಶ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಹಾಂತೇಶ್ ಯುವತಿಯೊಬ್ಬಳ ಜೊತೆಗಿನ ಖಾಸಗಿ ವೀಡಿಯೋವನ್ನು ತನ್ನದೇ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಹಣಕಾಸಿನ ವೈಷಮ್ಯದ ವಿಚಾರಕ್ಕೆ ಆ ಮೊಬೈಲ್ನ್ನು ಅಕ್ಬರ್ ಕಸಿದುಕೊಂಡಿದ್ದ. ಆದರೆ ವೀಡಿಯೋ ಎಲ್ಲಿ ಬಹಿರಂಗವಾಗುತ್ತದೆಯೋ ಎಂದು ಮಹಾಂತೇಶ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಆರೋಪಿ ಮಹಾಂತೇಶನನ್ನು ಹಾರೂಗೇರಿ ಪೊಲೀಸರು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments