Webdunia - Bharat's app for daily news and videos

Install App

ಯಾವುದರ ಭಯವಿಲ್ಲದ ಸಿದ್ದರಾಮಯ್ಯರನ್ನು ಏನೆಂದೂ ತಿಳಿದುಕೊಳ್ಳಬೇಕು: ಸಿಟಿ ರವಿ

Sampriya
ಶನಿವಾರ, 5 ಅಕ್ಟೋಬರ್ 2024 (18:52 IST)
ಚಿಕ್ಕಮಗಳೂರು: ಮುಖ್ಯಮಂತ್ರಿ ಅವರಿಗೆ ಕಾನೂನು-ಸಂವಿಧಾನದ ಬಗ್ಗೆ ಭಯವಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಟಾಂಗ್‌ ಕೊಟ್ಟರು.

ಚಿಕ್ಕಮಗಳೂರಿನ ಸೆಂಟ್ರಲ್ ಲೈಬ್ರರಿ ಬಳಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಹಿಂದೆಲ್ಲ ರಾಕ್ಷಸರು ತಾವು ಯಾರಿಗೂ ಹೆದರಲ್ಲ ಎಂದು ಹೇಳುತ್ತಿದ್ದರು. ಜನ, ಸಂವಿಧಾನ, ಕಾನೂನು, ನ್ಯಾಯಾಲಯಕ್ಕೆ ಹೆದರದವರನ್ನು ನಾವು ಏನೆಂದು ಅಂದುಕೊಳ್ಳಬೇಕು ವ್ಯಂಗ್ಯ ಮಾಡಿದರು

ರಾಯಚೂರಿನ ಸಮಾವೇಶದ ಕುರಿತು ಮಾತನಾಡಿ, ಅಧಿಕಾರ-ಹಣ ಉಪಯೋಗಿಸಿಕೊಂಡು ಯಾವ ಸಮಾವೇಶ ಬೇಕಾದರೂ ಮಾಡಬಹುದು. ಆದರೆ, ಸಮಾವೇಶಗಳ ಮೂಲಕ ಭ್ರಷ್ಟಾಚಾರ ಮುಚ್ಚಿ ಹಾಕಲು ಸಾಧ್ಯವಿಲ್ವಲ್ಲ ಎಂದು ವಾಗ್ದಾಳಿ ನಡೆಸಿದರು.

ಜಾತಿ ಜನಗಣತಿ ವಿಚಾರವಾಗಿ ಪ್ರತಿಕ್ರಿಯಿಸಿ, ತುಳಿತಕ್ಕೊಳಗಾದ ಜನರಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮುಂದುವರಿದರೆ ಸಮಸ್ಯೆ ಇಲ್ಲ. ‌ಆದರೆ, ಸಮಾಜ‌ ಒಡೆಯಲು, ಜಾತಿ ಎತ್ತಿಕಟ್ಟಲು, ರಾಜಕೀಯ ಮಾಡಿದ್ರೆ ಮಾತ್ರ ಯಾರೂ ಕ್ಷಮಿಸಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments