ಪೊಲೀಸರಿಗೆ ಶುರುವಾಗಿದೆ ಭೀತಿ : ಸ್ವಯಂ ನಿವೃತ್ತಿ ಹಾದಿ ಹಿಡಿದ ಅಧಿಕಾರಿಗಳು

Webdunia
ಶನಿವಾರ, 12 ಅಕ್ಟೋಬರ್ 2019 (15:07 IST)
ಪೊಲೀಸ್ ಹಾಗೂ ಅಧಿಕಾರಿಗಳ ಮೇಲೆ ಸೇವಾ ನಿರ್ಲಕ್ಷ್ಯ, ಅಪರಾಧ ಚಟುವಟಿಕೆ, ಅಕ್ರಮ ದಂಗೆ ತಡೆಯಲು ವಿಫಲವಾದವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ಕೆಲವು ಪೊಲೀಸ್ ಅಧಿಕಾರಿಗಳ ನಿದ್ದೆಗೆಡಿಸಿದೆ.

ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಅಪರಾಧ ಚಟುವಟಿಕೆ ಹಾಗೂ ಅಕ್ರಮ ದಂಗೆಗಳನ್ನು ತಡೆಗಟ್ಟಲು ಅಧಿಕಾರಿಗಳ ಮೇಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಹಿರಿಯ ಅಧಿಕಾರಿಯೊಬ್ಬರು ಹೆದರಿ ಸ್ವಯಂ ನಿವೃತ್ತಿ ಪಡೆಯಲು ಚಡಪಡಿಸುತ್ತಿದ್ದಾರೆ ಎಂಬ ಮಾತುಗಳು ಹೇಳಿ ಬರುತ್ತಿವೆ‌.

ಇನ್ನು ಕೆಲವು ಪೊಲೀಸರು ಇದೇ ದಾರಿ ತುಳಿಯಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಇದೇ ಅಧಿಕಾರಿವನ್ನು ವರ್ಗಾವಣೆಗೊಳಿಸಿದಾಗ ಕೆಎಟಿ ಮೊರೆ ಹೋಗಿ ಮರಳಿ ತಮ್ಮ ಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ.

ಆದರೆ ಆಗ ಆಯುಕ್ತ ಆರ್.ದಿಲೀಪ್ ಅವರು ಅವಳಿನಗರದಲ್ಲಿ ಅಕ್ರಮ ದಂಧೆ, ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಹಾಗೂ ಇಂತಹ ಚಟುವಟಿಕೆಗಳು ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುತ್ತಿದ್ದಾರೆ.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತಿರುವುದರಿಂದ ಬೆದರಿದ ಅಧಿಕಾರಿಯೊಬ್ಬರು ಈಗ ಸ್ವಯಂ ನಿವೃತ್ತಿ ಬೇಕೆಂದು ಮೇಲಧಿಕಾರಿಗಳಿಗೆ ದುಂಬಾಲು ಬಿದ್ದಿದ್ದಾರೆ ಎನ್ನಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಮುಂದಿನ ಸುದ್ದಿ
Show comments