Webdunia - Bharat's app for daily news and videos

Install App

ಪೊಲೀಸರಿಗೆ ಶುರುವಾಗಿದೆ ಭೀತಿ : ಸ್ವಯಂ ನಿವೃತ್ತಿ ಹಾದಿ ಹಿಡಿದ ಅಧಿಕಾರಿಗಳು

Webdunia
ಶನಿವಾರ, 12 ಅಕ್ಟೋಬರ್ 2019 (15:07 IST)
ಪೊಲೀಸ್ ಹಾಗೂ ಅಧಿಕಾರಿಗಳ ಮೇಲೆ ಸೇವಾ ನಿರ್ಲಕ್ಷ್ಯ, ಅಪರಾಧ ಚಟುವಟಿಕೆ, ಅಕ್ರಮ ದಂಗೆ ತಡೆಯಲು ವಿಫಲವಾದವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ಕೆಲವು ಪೊಲೀಸ್ ಅಧಿಕಾರಿಗಳ ನಿದ್ದೆಗೆಡಿಸಿದೆ.

ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಅಪರಾಧ ಚಟುವಟಿಕೆ ಹಾಗೂ ಅಕ್ರಮ ದಂಗೆಗಳನ್ನು ತಡೆಗಟ್ಟಲು ಅಧಿಕಾರಿಗಳ ಮೇಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಹಿರಿಯ ಅಧಿಕಾರಿಯೊಬ್ಬರು ಹೆದರಿ ಸ್ವಯಂ ನಿವೃತ್ತಿ ಪಡೆಯಲು ಚಡಪಡಿಸುತ್ತಿದ್ದಾರೆ ಎಂಬ ಮಾತುಗಳು ಹೇಳಿ ಬರುತ್ತಿವೆ‌.

ಇನ್ನು ಕೆಲವು ಪೊಲೀಸರು ಇದೇ ದಾರಿ ತುಳಿಯಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಇದೇ ಅಧಿಕಾರಿವನ್ನು ವರ್ಗಾವಣೆಗೊಳಿಸಿದಾಗ ಕೆಎಟಿ ಮೊರೆ ಹೋಗಿ ಮರಳಿ ತಮ್ಮ ಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ.

ಆದರೆ ಆಗ ಆಯುಕ್ತ ಆರ್.ದಿಲೀಪ್ ಅವರು ಅವಳಿನಗರದಲ್ಲಿ ಅಕ್ರಮ ದಂಧೆ, ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಹಾಗೂ ಇಂತಹ ಚಟುವಟಿಕೆಗಳು ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುತ್ತಿದ್ದಾರೆ.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತಿರುವುದರಿಂದ ಬೆದರಿದ ಅಧಿಕಾರಿಯೊಬ್ಬರು ಈಗ ಸ್ವಯಂ ನಿವೃತ್ತಿ ಬೇಕೆಂದು ಮೇಲಧಿಕಾರಿಗಳಿಗೆ ದುಂಬಾಲು ಬಿದ್ದಿದ್ದಾರೆ ಎನ್ನಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments