Webdunia - Bharat's app for daily news and videos

Install App

ಫೆ.29 ಮೇಕೆದಾಟು ಪಾದಯಾತ್ರೆ ಪ್ರಾರಂಭ

Webdunia
ಗುರುವಾರ, 17 ಫೆಬ್ರವರಿ 2022 (15:06 IST)
ಕೋವಿಡ್ ಹಿನ್ನೆಲೆಯಲ್ಲಿ ಮೊಟಕುಗೊಳಿಸಿದ್ದ 'ನಮ್ಮ ನೀರು ನಮ್ಮ ಹಕ್ಕು' ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ 'ಕಾಂಗ್ರೆಸ್ ಪಾದಯಾತ್ರೆ' ಫೆ.27ರಿಂದ ರಾಮನಗರದಿಂದ ಪುನರ್ ಆರಂಭ ಮಾಡಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಧಾನಸಭೆ ಮೊಗಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಬಜೆಟ್ ಅಧಿವೇಶನ ಆರಂಭವಾಗುವುದರೊಳಗೆ ಮೇಕೆದಾಟು ಪಾದಯಾತ್ರೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ನಗರದಲ್ಲಿ ಈ ಹಿಂದೆ ಉದ್ದೇಶಿಸಿದ್ದ ಮಾರ್ಗದಲ್ಲಿ ಕೆಲ ಮಾರ್ಪಾಡು ಮಾಡಲಾಗುವುದು' ಎಂದು ತಿಳಿಸಿದರು.
 
ಜ.9ರಿಂದ ಕನಕಪುರ ಜಿಲ್ಲೆಯ ಸಾತನೂರು ಸಮೀಪದ ಸಂಗಮದಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲಾಗಿತ್ತು. ಅಲ್ಲಿಂದ ದೊಡ್ಡ ಆಲಹಳ್ಳಿ, ಕನಕಪುರ, ಕೆ.ಪಿ.ದೊಡ್ಡಿ ಮೂಲಕ ಜ.13ಕ್ಕೆ ರಾಮನಗರ ತಲುಪಿತ್ತು. ಈ ವೇಳೆಗೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಮೂರನೇ ಅಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಹೀಗಾಗಿ ಜ.14ರಂದು ಪಾದಯಾತ್ರೆ ಮಾರ್ಗಮಧ್ಯೆ ಸ್ಥಗಿತಗೊಳಿಸಲಾಗಿತ್ತು.
 
ಇದೀಗ ಕೋವಿಡ್ ಸೋಂಕು ಇಳಿಕೆಯಾಗಿದ್ದು, ಪಾದಯಾತ್ರೆ ಪುನರ್ ಆರಂಭ ಮಾಡಲು ಕಾಂಗ್ರೆಸ್ ಉದ್ದೇಶಿಸಿದೆ. ಇದೀಗ ರಾಮನಗರದಿಂದ ಬೆಂಗಳೂರಿನ ವರೆಗೂ ಉಳಿದ 6 ದಿನಗಳ ಪಾದಯಾತ್ರೆ ಮುಂದುವರೆಯಲಿದೆ. ಈ ಸಂಬಂಧ ಪಕ್ಷದಲ್ಲಿ ಸಮಾಲೋಚನೆ ನಡೆಸಿದ್ದು, ಬೆಂಗಳೂರು ನಗರದ ಪಕ್ಷದ ಎಲ್ಲ ಶಾಸಕರು ಹಾಗೂ ಮುಖಂಡರೊಂದಿಗೆ ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಶಿವಕುಮಾರ್ ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮೋಟಾರ್ ಸೈಕಲ್‌ನಲ್ಲಿ ಐವರನ್ನು ಕೂರಿಸಿಕೊಂಡು ಸಾಹಸ, ವಿಡಿಯೋ ನೋಡಿ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ನರೇಂದ್ರ ಮೋದಿ ಸಾರ್ವಜನಿಕ ಜೀವನಕ್ಕೆ 25ರ ಸಂಭ್ರಮ: ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಸಿದ್ಧತೆ

ಮುಂದಿನ ಸುದ್ದಿ
Show comments