ನಗರದ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇಂದು ಆಯೋಜಿಸಲಾಗಿದ್ದ ರೌಡಿಗಳ ಫೆರೇಡ್ನಲ್ಲಿ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಮಾತನಾಡಿ ಇನ್ನು ಮುಂದೆ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಎಚ್ಚರಿಕೆ ನೀಡಿದರು.
ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಫೆರೇಡ್ನಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗಕ್ಕೆ ಸೇರಿದ 200 ಮಂದಿ ರೌಡಿಗಳು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಆಯುಕ್ತ ಅಲೋಕ್ ಕುಮಾರ್, ಮುಂದೆ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದಂತೆ ಮಾರ್ಗದರ್ಶನ ನೀಡಿದರು. ಇದೇ ವೇಳೆ, ಭಾಗಿಯಾದಲ್ಲಿ ಹೆಚ್ಚಿನ ದಂಡ ಹಾಗೂ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.