Webdunia - Bharat's app for daily news and videos

Install App

ಮಂಗಳೂರಿನಲ್ಲಿ ರಸಗೊಬ್ಬರ ಕಾರ್ಖಾನೆ ಆರಂಭ : ಸಚಿವ‌ ನಿರಾಣಿ

Webdunia
ಶುಕ್ರವಾರ, 13 ಮೇ 2022 (13:45 IST)
ಮಂಗಳೂರು: ನಗರದಲ್ಲಿ ಸುಮಾರು 7,500 ಕೋಟಿ ರು. ಹೂಡಿಕೆಯಲ್ಲಿ ರಸಗೊಬ್ಬರ ಕಾರ್ಖಾನ ಆರಂಭಿಸುವ ಸಿದ್ಧತೆ ನಡೆಯುತ್ತಿದ್ದು, ಇದರಿಂದ 10 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ದೊರಕಲಿದೆ. ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನಕ್ಕಿಂತ ಮೊದಲೇ ಇದರ ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.
 
ನಗರದ ಹೋಟೆಲ್‌ ಓಷಿಯನ್‌ ಪರ್ಲ್‌ನಲ್ಲಿ  ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಕರ್ನಾಟಕ ಮೆರಿಟೈಮ್‌ ಬೋರ್ಡ್‌ ಸಹಭಾಗಿತ್ವದಲ್ಲಿ ಆಯೋಜಿಸಲಾದ ‘ಕರ್ನಾಟಕ ಕೋಸ್ಟ್‌ಲೈನ್‌ ಬಿಜಿನೆಸ್‌ ಮತ್ತು ಮೆರಿಟೈಮ್‌ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಕೈಗಾರಿಕೆಗಳ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಗ್ರಾ.ಪಂ.ನಿಂದ ಪಾಲಿಕೆ ವರೆಗೆ ವಿವಿಧ ಸ್ಥಳಿಯ ಸಂಸ್ಥೆಗಳು ಕಿರುಕುಳ ನೀಡುತ್ತಿರುವ ಕುರಿತಂತೆ ದೂರುಗಳು ಬಂದಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಪಾವತಿ ವ್ಯವಸ್ಥೆ ಸರಳೀಕರಣ ಮಾಡಲಾಗುವುದು ಎಂದು ಅವರು ಹೇಳಿದರು.
 
ಮೆರಿಟೈಮ್‌ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಡಿಯೊ ಸಂದೇಶ ನೀಡಿ, 360 ಕಿ.ಮೀ. ವ್ಯಾಪ್ತಿಯ ಕರಾವಳಿ ಪ್ರದೇಶ ಅಭಿವೃದ್ಧಿಗೆ ಎಂಟು ಸಾವಿರ ಕೋಟಿ ರು. ಮೊತ್ತದ ಸಾಗರಮಾಲಾ ಯೋಜನೆ ಅನುಷ್ಠಾನಕ್ಕೆ ಬರುತ್ತಿದ್ದು, ಅದರಲ್ಲಿ ಪ್ರವಾಸಿ ಬಂದರು ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಎಂದರು.
ಗುಜರಾತ್‌, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳ ಪ್ರವಾಸಿಗರನ್ನು ಬಂದರು ಮೂಲಕ ಆಕರ್ಷಿಸುವ ಪ್ರಯತ್ನ ಮಾಡಲಾಗುವುದು.
 
ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಮಾಡಲಾಗುವುದು. ಬಂದರಿನಲ್ಲಿ ರೋಬೋ ತಂತ್ರಜ್ಞಾನ ಮೂಲಕ ನಿರ್ವಹಣಾ ಸಾಮರ್ಥ್ಯ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮೆರಿಟೈಮ್‌ ಬೋರ್ಡ್‌ ಮೂಲಕ ಸಮುದ್ರ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

ಮುಂದಿನ ಸುದ್ದಿ
Show comments