Webdunia - Bharat's app for daily news and videos

Install App

SSLC ಪರೀಕ್ಷೆಗೆ ಹಬ್ಬದ ವಾತಾವರಣ

Webdunia
ಗುರುವಾರ, 21 ಮಾರ್ಚ್ 2019 (19:22 IST)
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಲು ಹಬ್ಬದ ವಾತಾವರಣ ಅಲ್ಲ ನಿರ್ಮಾಣವಾಗಿತ್ತು.

ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ತಲಾ 21 ಪರೀಕ್ಷಾ ಕೇಂದ್ರದಲ್ಲಿ ಇವತ್ತು ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಇಂದು ಪ್ರಥಮ ಭಾಷಾ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಪೈಕಿ ಬಹುತೇಕ ಕಡೆ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಬ್ಯಾನರ್‌ ಅಳವಡಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿರುವ ಜತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಿ, ಹಬ್ಬದ ವಾತಾವರಣ ನಿರ್ಮಾಣ ಮಾಡಲಾಗಿತ್ತು. ಕೆಲವೆಡೆ ಸ್ವಾಗತ ಫಲಕ, ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.

ಚೆಂಡೆ ವಾದ್ಯ, ಗುಲಾಬಿ ಹೂ, ಶಿಕ್ಷಕ ವರ್ಗದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆದಿತ್ತು.

ಖಾಸಗಿಯಾಗಿ ಎಸ್‌ಡಿಎಂಸಿಯಿಂದ ವಿದ್ಯಾರ್ಥಿಗಳಿಗೆ ಪಾನೀಯ, ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಬರೆಯಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments