Select Your Language

Notifications

webdunia
webdunia
webdunia
webdunia

ನಮ್ಮ ಕುಟುಂಬವನ್ನು ತುಳಿಯುವ ಸಂಚು ನಡೆಯುತ್ತಿದೆ: ದೇವೇಗೌಡ

ನಮ್ಮ ಕುಟುಂಬವನ್ನು ತುಳಿಯುವ ಸಂಚು ನಡೆಯುತ್ತಿದೆ: ದೇವೇಗೌಡ
ಬೆಂಗಳೂರು , ಮಂಗಳವಾರ, 1 ನವೆಂಬರ್ 2016 (13:12 IST)
ನಮ್ಮ ಕುಟುಂಬವನ್ನು ರಾಜಕೀಯವಾಗಿ ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ನಮ್ಮ ಕುಟುಂಬದ ಸದಸ್ಯರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೂಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿದ ಸಮಾಜ ಪರಿವರ್ತನಾ ಸಮುದಾಯ ಹೋರಾಟ ಸಮಿತಿ ಮುಖ್ಯಸ್ಥ ಎಸ್.ಆರ್.ಹಿರೇಮಠ್ ವಿರುದ್ಧ ಗೌಡರು ವಾಗ್ದಾಳಿ ನಡೆಸಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸಂಘಕ್ಕೂ ನನಗೂ ಏನು ಸಂಬಂಧ? ರಾಜಕೀಯ ನೋಡಿಕೊಳ್ಳೋದು ಮಾತ್ರ ನನ್ನ ಕೆಲಸವೇ ಹೊರತು ಸಂಘ ನೋಡಿಕೊಳ್ಳುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಒಕ್ಕಲಿಗರ ಸಂಘದಲ್ಲಿ ಎಲ್ಲವು ಸರಿಯಿಲ್ಲ ಎನ್ನುವ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಅವರು ಸರಿ ಮಾಡ್ತಿನಿ ಅಂದಿದ್ದಾರಲ್ಲ. ಮಾಡ್ಲಿ ಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಭಾಷೆಗೆ ಮೊದಲನೇ ಶತ್ರು ಕಂಗ್ಲೀಶ್: ಅನಂತ್ ಕುಮಾರ್