Webdunia - Bharat's app for daily news and videos

Install App

ಬಸ್​​​ ಚಾಲಕ & ಬೈಕ್​ ಸವಾರನ ನಡುವೆ ಮಾರಾಮಾರಿ

Webdunia
ಶನಿವಾರ, 26 ನವೆಂಬರ್ 2022 (14:19 IST)
BMTC ಬಸ್​ ಚಾಲಕ ಬೈಕ್​ ಸವಾರನ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ ಬೆಂಗಳೂರಿನ ಯಲಹಂಕ ಬಳಿ ನಡೆದಿದೆ. ಸಂದೀಪ್ ಹಲ್ಲೆಗೊಳಗಾದ ಬೈಕ್​ ಸವಾರ. ಯಲಹಂಕ ಬಳಿ ಸಂದೀಪ್ ತಮ್ಮ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ BMTC​ ಬಸ್​ವೊಂದು ಮತ್ತೊಂದು ಬಸ್​ನ್ನು ಓವರ್​ ಟೇಕ್​ ಮಾಡಲು ಯತ್ನಿಸಿದೆ. ಆಗ ಬೈಕ್​​ ಸವಾರ ಅಡ್ಡಿಪಡಿಸಿದನೆಂದು BMTC ಬಸ್​​ ಚಾಲಕ ಆನಂದ್, ಬೈಕ್​ ಸವಾರ ಸಂದೀಪನೊಂದಿಗೆ ಕಿರಿಕ್​ ತೆಗೆದಿದ್ದಾನೆ. ಈ ವೇಳೆ ಸಂದೀಪ, ಆನಂದ್​​​​ಗೆ ​ಮಧ್ಯದ ಬೆರಳು ತೋರಿಸಿದ್ದಾನೆ. ಇದಕ್ಕೆ ಕ್ರೋದಗೊಂಡ ಆನಂದ್​, ಸಂದೀಪ್​ನೊಂದಿಗೆ ಜಗಳಕ್ಕೆ ಇಳಿದಿದ್ದಾನೆ. ಗಲಾಟೆ ತಾರಕಕ್ಕೆ ಏರಿ ಚಾಲಕ ಆನಂದ್​ ಸಂದೀಪ್​ಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನೂ ಗಾಯಾಳು ಬೈಕ್​ ಸವಾರ ಸಂದೀಪ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​​ ಚಾಲಕ ಆನಂದ್​​ನನ್ನು ಅಮಾನತು ಮಾಡಿ BMTC ಆದೇಶ ಹೊರಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments