ಹಣಕ್ಕಾಗಿ ಅರ್ಚಕರ ನಡುವೆ ಹೊಡೆದಾಟ

Webdunia
ಮಂಗಳವಾರ, 17 ಜನವರಿ 2023 (18:17 IST)
ತಟ್ಟೆ ಕಾಸಿಗಾಗಿ ಪೂಜಾರಿಗಳು ಹೊಡೆದಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ನಡೆದಿದೆ.‌ ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ‌ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿ ದೃಶ್ಯ ವೈರಲ್‌ ಆಗಿದೆ. ಘಟನೆ ಎರಡು ಮೂರು ದಿನದ ಹಿಂದೆ ನಡೆದಿದ್ದು, ವೀಡಿಯೋ ವೈರಲ್ಲಾದ ಬಳಿಕ ಹೊಡೆದಾಟ ಬೆಳಕಿಗೆ ಬಂದಿದೆ. ಭಾನುವಾರ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಶ್ರೀ ಸಿದ್ದಪ್ಪಾಜಿ ದೇವಾಲಯದ ಅರ್ಚಕ ಕುಟುಂಬದವರಿಗೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ರಾಜ್ಯದಲ್ಲಿಯೇ ಶ್ರೀ ಕ್ಷೇತ್ರ ಸಿದ್ದಪ್ಪಾಜಿ ಜಾತ್ರೆ ಹೆಸರುವಾಸಿಯಾಗಿದ್ದು, ಜನವರಿ 6 ರಿಂದ 10 ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆದಿತ್ತು. ಜಾತ್ರೆ ಮುಗಿದರೂ ಭಕ್ತರು ರಾಜ್ಯದ ನಾನಾ ಭಾಗಗಳಿಂದ ಚಿಕ್ಕಲ್ಲೂರಿಗೆ ಇನ್ನೂ ಭೇಟಿ ನೀಡುತ್ತಲೇ ಇದ್ದಾರೆ. ಜಾತ್ರೆಗೆ ಬಾರದ ಜನರು ಇದೀಗ ಹರಕೆ ತೀರಿಸುತ್ತಿದ್ದಾರೆ. ಈ ವೇಳೆ ಭಕ್ತರು ಹಾಕಿದ ತಟ್ಟೆ ಕಾಸಿಗೆ ಪೂಜಾರಿಗಳು ಹೊಡೆದಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments