ಹಣಕ್ಕಾಗಿ ಅರ್ಚಕರ ನಡುವೆ ಹೊಡೆದಾಟ

Webdunia
ಮಂಗಳವಾರ, 17 ಜನವರಿ 2023 (18:17 IST)
ತಟ್ಟೆ ಕಾಸಿಗಾಗಿ ಪೂಜಾರಿಗಳು ಹೊಡೆದಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ನಡೆದಿದೆ.‌ ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ‌ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿ ದೃಶ್ಯ ವೈರಲ್‌ ಆಗಿದೆ. ಘಟನೆ ಎರಡು ಮೂರು ದಿನದ ಹಿಂದೆ ನಡೆದಿದ್ದು, ವೀಡಿಯೋ ವೈರಲ್ಲಾದ ಬಳಿಕ ಹೊಡೆದಾಟ ಬೆಳಕಿಗೆ ಬಂದಿದೆ. ಭಾನುವಾರ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಶ್ರೀ ಸಿದ್ದಪ್ಪಾಜಿ ದೇವಾಲಯದ ಅರ್ಚಕ ಕುಟುಂಬದವರಿಗೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ರಾಜ್ಯದಲ್ಲಿಯೇ ಶ್ರೀ ಕ್ಷೇತ್ರ ಸಿದ್ದಪ್ಪಾಜಿ ಜಾತ್ರೆ ಹೆಸರುವಾಸಿಯಾಗಿದ್ದು, ಜನವರಿ 6 ರಿಂದ 10 ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆದಿತ್ತು. ಜಾತ್ರೆ ಮುಗಿದರೂ ಭಕ್ತರು ರಾಜ್ಯದ ನಾನಾ ಭಾಗಗಳಿಂದ ಚಿಕ್ಕಲ್ಲೂರಿಗೆ ಇನ್ನೂ ಭೇಟಿ ನೀಡುತ್ತಲೇ ಇದ್ದಾರೆ. ಜಾತ್ರೆಗೆ ಬಾರದ ಜನರು ಇದೀಗ ಹರಕೆ ತೀರಿಸುತ್ತಿದ್ದಾರೆ. ಈ ವೇಳೆ ಭಕ್ತರು ಹಾಕಿದ ತಟ್ಟೆ ಕಾಸಿಗೆ ಪೂಜಾರಿಗಳು ಹೊಡೆದಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments