ಮಹಿಳೆಯೊಬ್ಬಳ ಸ್ಥಿತಿ ಗಂಭೀರ: ಎರಡು ಗುಂಪುಗಳ ನಡುವೆ ಮಾರಾಮಾರಿ...!

Webdunia
ಶನಿವಾರ, 25 ಆಗಸ್ಟ್ 2018 (14:23 IST)
ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಮಹಿಳೆಯೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೊರೆಕಲ್ ತಾಂಡ ಗ್ರಾಮದಲ್ಲಿ ಒಂದು ಅಂಗನವಾಡಿ ಹುದ್ದೆಗಾಗಿ ಇಬ್ಬರು ಅರ್ಜಿ ಸಲ್ಲಿಸಿದ್ರು. ಈ ನಡುವೆ ಶಿಶು ಅಭಿವೃದ್ಧಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇರಿಟ್ ಆಧಾರದಲ್ಲಿ ನೇಮಕಾತಿ ಪ್ರಕ್ರೀಯೆ ಪೂರ್ಣಗೊಳಿಸಿತ್ತು. ಆದ್ರೆ ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಯೋಜನಾಧಿಕಾರಿ ಜಗನ್ನಾಥ ಗಾಧಾ, ತಾಂಡಾಗೆ ತೆರಳಿ ಪರಿಶಿಲನೆ ಮಾಡ್ತಿದ್ದರು. ಈ ವೇಳೆಯಲ್ಲಿ ಎರಡು ಅಭ್ಯರ್ಥಿಗಳ ಪರ ಬೆಂಬಲಿಗರು ಒಬ್ಬರ ಮೇಲೊಬ್ಬರು ದೋಣ್ಣೆ, ಕಲ್ಲಿನಿಂದ ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಸಂತಪೂರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಈ ಪೈಕಿ ಮಹಿಳೆಯೊಬ್ಬಳ ಸ್ಥಿತಿ ಚಿಂತಾಜನಕವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಠಾಣಾಕುಶನೂರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತಲೆ ಎತ್ತುವ ಪರಿಸ್ಥಿತಿಯಲ್ಲಿ ಇಲ್ಲ: ಛಲವಾದಿ ನಾರಾಯಣಸ್ವಾಮಿ

ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರ, ಸಿಎಂಗೆ ಪತ್ರ ಬರೆದ ಆರ್ ಅಶೋಕ್

ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಶಾಕಿಂಗ್ ನಿರ್ಧಾರ

Gold Price: ಚಿನ್ನ, ಬೆಳ್ಳಿ ಬಲು ದುಬಾರಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments