Webdunia - Bharat's app for daily news and videos

Install App

ಮಹಿಳೆಯೊಬ್ಬಳ ಸ್ಥಿತಿ ಗಂಭೀರ: ಎರಡು ಗುಂಪುಗಳ ನಡುವೆ ಮಾರಾಮಾರಿ...!

Webdunia
ಶನಿವಾರ, 25 ಆಗಸ್ಟ್ 2018 (14:23 IST)
ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಮಹಿಳೆಯೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೊರೆಕಲ್ ತಾಂಡ ಗ್ರಾಮದಲ್ಲಿ ಒಂದು ಅಂಗನವಾಡಿ ಹುದ್ದೆಗಾಗಿ ಇಬ್ಬರು ಅರ್ಜಿ ಸಲ್ಲಿಸಿದ್ರು. ಈ ನಡುವೆ ಶಿಶು ಅಭಿವೃದ್ಧಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇರಿಟ್ ಆಧಾರದಲ್ಲಿ ನೇಮಕಾತಿ ಪ್ರಕ್ರೀಯೆ ಪೂರ್ಣಗೊಳಿಸಿತ್ತು. ಆದ್ರೆ ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಯೋಜನಾಧಿಕಾರಿ ಜಗನ್ನಾಥ ಗಾಧಾ, ತಾಂಡಾಗೆ ತೆರಳಿ ಪರಿಶಿಲನೆ ಮಾಡ್ತಿದ್ದರು. ಈ ವೇಳೆಯಲ್ಲಿ ಎರಡು ಅಭ್ಯರ್ಥಿಗಳ ಪರ ಬೆಂಬಲಿಗರು ಒಬ್ಬರ ಮೇಲೊಬ್ಬರು ದೋಣ್ಣೆ, ಕಲ್ಲಿನಿಂದ ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಸಂತಪೂರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಈ ಪೈಕಿ ಮಹಿಳೆಯೊಬ್ಬಳ ಸ್ಥಿತಿ ಚಿಂತಾಜನಕವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಠಾಣಾಕುಶನೂರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments