Select Your Language

Notifications

webdunia
webdunia
webdunia
webdunia

ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಂದ ಮಾರಾಮಾರಿ

ಕಾಲೇಜು ಆವರಣ
ಆನೇಕಲ್ , ಶನಿವಾರ, 6 ಅಕ್ಟೋಬರ್ 2018 (17:09 IST)
ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ‌ ಎರಡು ಗುಂಪುಗಳ  ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ನೈಸ್ ರಸ್ತೆಯ ಬಳಿಯಿರುವ ಟಿ ಜಾನ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.  

ಕಾಲೇಜಿನ ವಿದ್ಯಾರ್ಥಿಗಳು ದುಷ್ಚಟಗಳಿಗೆ ದಾಸರಾಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಬಾರಿಯು ಸಹ ಇದೇ ಕಾಲೇಜು ಆವರಣದಲ್ಲಿ ಸೀನಿಯರ್ ವಿದ್ಯಾರ್ಥಿಗಳಿಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆದಿತ್ತು.
ರ್ಯಾಗಿಂಗ್ ನಡೆಯುತ್ತಿದ್ದರು ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿದೆ.  




Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ಪಲ್ಟಿ ಹೇಗಾಯ್ತು ಗೊತ್ತಾ?