Publish Date: Sat, 06 Oct 2018 (17:09 IST)
Updated Date: Sat, 06 Oct 2018 (17:12 IST)
ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ನೈಸ್ ರಸ್ತೆಯ ಬಳಿಯಿರುವ ಟಿ ಜಾನ್ ಕಾಲೇಜಿನಲ್ಲಿ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿನ ವಿದ್ಯಾರ್ಥಿಗಳು ದುಷ್ಚಟಗಳಿಗೆ ದಾಸರಾಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಬಾರಿಯು ಸಹ ಇದೇ ಕಾಲೇಜು ಆವರಣದಲ್ಲಿ ಸೀನಿಯರ್ ವಿದ್ಯಾರ್ಥಿಗಳಿಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆದಿತ್ತು.
ರ್ಯಾಗಿಂಗ್ ನಡೆಯುತ್ತಿದ್ದರು ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿದೆ.