Webdunia - Bharat's app for daily news and videos

Install App

ಪತಿಯ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲು

Webdunia
ಗುರುವಾರ, 22 ಸೆಪ್ಟಂಬರ್ 2022 (11:29 IST)
ಕೊಪ್ಪಳ : ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪತ್ನಿಗೆ ಹೇಳಿ ಹೋದಾತನ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲಾಗಿದೆ.
 
ಕೊಪ್ಪಳ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯರ ಮದುವೆಯ ರಕ್ಷಣೆ ಕಾಯ್ದೆಯಡಿ ಖಾಜೀದಾ ಬೇಗಂ ಗಂಡನ ವಿರುದ್ಧ ತ್ರಿವಳಿ ತಲಾಕ್ನಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಈ ಕುರಿತು ಪತಿ ಹಾಗೂ ಅವರ ಮನೆಯವರ ಮೇಲೆ ದೂರು ದಾಖಲಾಗಿ ಕೋರ್ಟ್ನಲ್ಲಿ ವಿಚಾರಣೆಯಲ್ಲಿತ್ತು. ಖಾಜೀದಾ ಬೇಗಂ ಅವರು ಕೊಪ್ಪಳದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗಂಡನ ವಿರುದ್ಧ ಡೊಮೆಸ್ಟಿಕ್ ವೈಲೆನ್ಸ್ ಪ್ರಕರಣ ದಾಖಲು ಮಾಡಿದ್ದರ ಕುರಿತಂತೆ ಸೆ.15 ರಂದು ವಿಚಾರಣೆ ನಡೆಯುತ್ತಿತ್ತು. 

ಖಾಜೀದಾ ಬೇಗಂ ತನ್ನ ತಂದೆಯೊಂದಿಗೆ ಕೋರ್ಟ್ಗೆ ಆಗಮಿಸಿದ್ದ ವೇಳೆ ಕೋರ್ಟ್ ಗೇಟ್ ಬಳಿ ಪತಿ ಸೈಯದ್ ವಾಹೀದ್ ಆತ್ತಾರ್ ತಡೆದು ನಿಲ್ಲಿಸಿ ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ.

ನನ್ನ ತಂಟೆಗೆ ಬಂದರೆ ಸಾಯಿಸಿ ಬಿಡುತ್ತೇನೆ ಎಂದು ಹೇಳಿ ಮೂರು ಬಾರಿ ತಲಾಕ್ ಶಬ್ದ ಹೇಳಿ  ಹೋಗಿರುವ ಕುರಿತು ಖಾಲೀದಾ ಬೇಗಂ, ಸೈಯದ್ ವಾಹೀದ್ ಮೇಲೆ ಸೆ.18 ರಂದು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಮಹಿಳೆಯರ ಮದುವೆಯ ರಕ್ಷಣೆ ಕಾಯ್ದೆಯಡಿಯಲ್ಲಿ ತ್ರಿವಳಿ ತಲಾಕ್ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments