ಚಿತ್ರನಟ ಮಾಸ್ಟರ್ ಆನಂದ್​ಗೆ ವಂಚನೆ

Webdunia
ಸೋಮವಾರ, 26 ಜೂನ್ 2023 (19:34 IST)
ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ಮುಂಗಡ ಹಣ ಪಡೆದು ವಂಚಿಸಲಾಗಿದ್ದು, ಚಂದ್ರ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 2020ರ ಸೆಪ್ಟಂಬರ್‌ನಿಂದ 2021 ರ ಅಕ್ಟೋಬರ್‌ನ ಅವಧಿಯಲ್ಲಾದ ವಂಚನೆಗೆ ಸಂಬಂಧಿಸಿದಂತೆ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ವಿರುದ್ಧ ಮಾಸ್ಟರ್ ಆನಂದ್ ಚಂದ್ರ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ಆನಂದ್ ಶೂಟಿಂಗ್‌ಗಾಗಿ ತೆರಳಿದ್ದ ವೇಳೆ ನಿವೇಶನಗಳನ್ನು ನೋಡಿದ್ದರು. ಮನಿಕಾ ಕೆಂ.ಎಂ.ನಿಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ರು . ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.50 ಲಕ್ಷ ಮುಂಗಡ ಹಣವನ್ನು ಕಂಪನಿಗೆ ಮಾಸ್ಟರ್ ಆನಂದ್ ನೀಡಿದ್ದರು. ಕಂಪನಿಯು ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನು ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನ ಕಂಪನಿ ಬೇರೆಯವರಿಗೆ ಮಾರಾಟ ಮಾಡಿದ್ದು, ಈ ಬಗ್ಗೆ ವಿಚಾರಿಸಿದಾಗ ಕಂಪನಿ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನ ಸಹ ವಾಪಸ್ ನೀಡದೆ ವಂಚನೆ ಮಾಡಿದೆ. ಇನ್ನು ವಂಚನೆ ಬಗ್ಗೆ ಚಂದ್ರ ಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದು, FIR ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಮುಂದಿನ ಸುದ್ದಿ
Show comments