ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 1 ನವೆಂಬರ್ 2025 (16:31 IST)
ಬೆಂಗಳೂರು: ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. 

ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಮಾನವೀಯ ಮೌಲ್ಯಗಳನ್ನು ಬೆಸೆಯುವ ಕನ್ನಡ ಸಿನಿಮಾಗಳು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂಬುದು ನಮ್ಮ ಆಶಯ ಎಂದು ಅವರು ಬರೆದುಕೊಂಡಿದ್ದಾರೆ. 


ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ

ರಾಜ್ಯದಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶ ಹೊರಡಿಸಿದ್ದೇವೆ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಬ್ಯಾಂಕ್‌ಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತರಾಮನ್

ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರ ಕ್ಷಮೆ ಕೇಳಬೇಕು: ಬಿವೈ ವಿಜಯೇಂದ್ರ

"ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ

ಮುಸ್ಲಿಮರಿಗೆ ಇಷ್ಟವಾಗಲ್ಲ ಎಂದು ವಂದೇಮಾತರಂ ಕಡಿತಗೊಳಿಸಿದ್ದು ಜವಹರಲಾಲ್ ನೆಹರು: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments