Select Your Language

Notifications

webdunia
webdunia
webdunia
webdunia

ಸೌಂದರ್ಯ ಜಗದೀಶ್ ಕುಟುಂಬದ ಪುಂಡಾಟ

ಸೌಂದರ್ಯ ಜಗದೀಶ್ ಕುಟುಂಬದ ಪುಂಡಾಟ
ಬೆಂಗಳೂರು , ಬುಧವಾರ, 27 ಅಕ್ಟೋಬರ್ 2021 (18:28 IST)
ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದ ಪುಂಡಾಟ ಪ್ರಕರಣದಲ್ಲಿ ಆರೋಪವೇ ಇಲ್ಲದ ಸೆಕ್ಯುರಿಟಿ ಗಾರ್ಡ್ ನನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗನಳನ್ನು ಬಂಧಿಸದೇ ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ ಪೊಲೀಸರ ಕ್ರಮ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.
 
ಯಾವುದೇ ಪ್ರಭಾವಕ್ಕೆ ಒಳಗಾಗದೇ ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಸೂಚಿಸಿದ್ದರು. ಇದರ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸಲು ಆರು ವಿಶೇಷ ತಂಡಗಳನ್ನು ರಚಿಸಿದ್ದರು. ಮಲ್ಲೇಶ್ವರಂ ಎಸಿಪಿ ವೆಂಕಟೇಶ ನಾಯ್ಡು ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದರು. ಸೌಂದರ್ಯ ಜಗದೀಶ್ ಅವರ ಮನೆಯ ಸೆಕ್ಯುರಿಟಿ ಗಾರ್ಡ್ ಬಾಲಾಜಿಯನ್ನು ಬಂಧಿಸಿದ್ದಾರೆ. ಹಿರಿಯ ಅಧಿಕಾರಿಗಳನ್ನು ಮೆಚ್ಚಿಸಲು ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರಾ? ಎಂಬ ಪ್ರಶ್ನೆ ಎದುರಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಸ್ಕಾಂನಿಂದ ಜನಸ್ನೇಹಿ ಕಚೇರಿ ಪ್ರಾರಂಭ ...!!!!