Daily Horoscope

ಕಾಂಗ್ರೆಸ್ ನಿಂದ ಮಹಾನ್ ಯೋಧನಿಗೆ ಅಂತಿಮ ನಮನ

Webdunia
ಗುರುವಾರ, 9 ಡಿಸೆಂಬರ್ 2021 (20:16 IST)
ಭಾರತೀಯ ಸೇನೆಯ ಪರಮೋಚ್ಚ ಅಧಿಕಾರಿ ಸಿಡಿಎಸ್ ಬಿಪಿನ್ ರಾವತ್ ರವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನೀರಾ ಮೈನಾ ರವರು ಭಾರತಾಂಬೆಯ ಸುಪುತ್ರ ,ಅಪ್ರತಿಮ ಯೋಧ  ಬಿಪಿನ್ ರಾವತ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿದರು .ಅವರ 40 ವರ್ಷಗಳ ಸೇನೆಯಲ್ಲಿ ನಿಸ್ವಾರ್ಥ ಸೇವೆ ಎಲ್ಲಾ ಭಾರತೀಯರಿಗೆ ಆದರ್ಶವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಮಾಜಿ ಮೂಡ ಅಧ್ಯಕ್ಷರಾದ ಚುಮ್ಮಿದೇವಯ್ಯ ನವರು ಮಾತನಾಡಿ ಭಾರತೀಯ ಸೇನೆ ಬಿಪಿನ್ ರಾವತ್ ರವರ ಅಗಲಿಕೆಯಿಂದ ಅಪಾರ ನಷ್ಟ ಅನುಭವಿಸಿದ್ದು ಅವರ ಸೇವೆ ಚಿರಸ್ಥಾಯಿಯಾಗಿ ಉಳಿದಿದೆ ಎಂದರು .
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷರಾದ  ರಾಜೇಶ್ ಯಲ್ಲಪ್ಪ ನವರು ಬಿಪಿನ್ ರಾವತ್ ರವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಪ್ರತಿಯೊಬ್ಬ ಭಾರತೀಯನಿಗೆ ನೀಡಲಿ ಎಂದು ಪ್ರಾರ್ಥಿಸಿದರು . ಇಂತಹ ದುರ್ಘಟನೆ ಮುಂದೆಂದೂ ಮರುಕಳಿಸದಿರಲಿ ಎಂದು ಹೇಳಿದರು .
ಆರಂಭದಲ್ಲಿ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಿಪಿನ್ ರಾವತ್ ಅಮರ್ ರಹೇ ಘೋಷಣೆ ಕೂಗಲಾಯಿತು .
ಬಿಪಿನ್ ರಾವತ್ ,ಅವರ ಪತ್ನಿ ಮತ್ತು ಇತರ  ಮೃತಸೇನಾ ಸಿಬ್ಬಂದಿಗಳ  ಅತ್ಮಕ್ಕೆ ಶಾಂತಿ ಕೋರಿ ಸಭೆ ಒಂದು ನಿಮಿಷದ ಮೌನಾಚರಣೆ ನಡೆಸಿತು .
ವೇದಿಕೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ ಪಿ ಸುರೇಶ್ ,ಮಾಜಿ ಮೂಡಾ ಅಧ್ಯಕ್ಷರಾದ ಮುನೀರ್ ಅಹಮದ್ , ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಸೈನಿಕ ಘಟಕದ ಜಿಲ್ಲಾಧ್ಯಕ್ಷರಾದ ಬೊಳ್ಳಿಯಂಡ ಗಣೆಶ್,ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಖಲೀಲ್ ಬಾಷ ,ನಗರ ಕಾಂಗ್ರೆಸ್ ಮಹಿಳಾಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ ,ಮುಖಂಡರಾದ ಅಂಬೇಕಲ್ ನವೀನ್ , ಕಾನೆಹಿತ್ಲು ಮೊಣ್ಣಪ್ಪ ,ಯಾಕೂಬ್ ,ಜಿ ಸಿ ಜಗದೀಶ್ ,ಕೊಕ್ಕಂಡ ಚಂಗಪ್ಪ ,ಸೌಕತ್ ಆಲಿ ,ಬೊಳ್ನಂಡ ನಾಚಪ್ಪ ,ಸೌಕತ್ ಆಲಿ ,ಎಂ ಎಂ ಹನೀಫ್ ಎ ಜಿ ರಮೇಶ್ ,ರಾಣಿ. ಉಷಾ ಸೇರಿದಂತೆ ಇತರರು ಭಾಗವಹಿಸಿದ್ದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments