ಮೈಸೂರು-ಕುಶಾಲನಗರ ರೈಲು ಮಾರ್ಗದ ಅಂತಿಮ ಯೋಜನಾ ವರದಿ:ಸಂಸದ ಪ್ರತಾಪ್ ಸಿಂಹ

Webdunia
ಶನಿವಾರ, 5 ಫೆಬ್ರವರಿ 2022 (21:06 IST)
ಮೈಸೂರಿನಿಂದ ಕುಶಾಲನಗರದವರೆಗೆ ರೈಲು ಮಾರ್ಗ ನಿರ್ಮಾಣ ಯೋಜನೆಗೆ ತಾನು ಬದ್ಧನಾಗಿದ್ದರೆ, ರೈಲು ಮಾರ್ಗದ ಅಂತಿಮ ಯೋಜನೆ ಯೋಜನೆ ವರದಿಯಾಗಿದೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಶೇ. 50ರ ಯೋಜನಾ ವೆಚ್ಚ ಮತ್ತು ಭೂಸ್ವಾಧೀನ ಪ್ರಕ್ರಿಯೆ ಕಾರ್ಯ ಬಾಕಿ ಇದ್ದು, ರಾಜ್ಯ ಸರ್ಕಾರ ತ್ವರಿತ ಗತಿಯಲ್ಲಿ ಕಡತ ವಿಲೇವಾರಿ ಮಾಡಿದ್ದೇ ಆದಲ್ಲಿ ರೈಲು ಯೋಜನೆ ಕೂಡಾ ಬಿರುಸು ಪಡೆಯಲಿದೆ ಎಂದರಲ್ಲದೆ, ರೈಲು ಮಾರ್ಗ ಯೋಜನೆ ಅನುಷ್ಠಾನ ನಿಶ್ಚಿತ ಎಂದರು.
 
ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ:
ಶ್ರೀರಂಗಪಟ್ಟಣ – ಗುಡ್ಡೆಹೊಸೂರು ನಡುವೆ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಮೇ ತಿಂಗಳಿನಲ್ಲಿ ಆರಂಭವಾಗಲಿದ್ದು, ನಾಲ್ಕು ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿ ಎರಡೂವರೆ ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಅವರು ಇದೇ ಸಂದರ್ಭ ತಿಳಿಸಿದರು.
ಸುಮಾರು 9500 ಕೋಟಿ ರೂ. ವೆಚ್ಚದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದಸರಾಕ್ಕೂ ಮುನ್ನ ಉದ್ಘಾಟನೆಯಾಗಲಿದ್ದು, ಇದು ಕಾರ್ಯಾರಂಭವಾದಲ್ಲಿ ಕೆಂಗೇರಿಯಿಂದ ಮೈಸೂರಿಗೆ ಕೇವಲ ಒಂದು ಗಂಟೆಯಲ್ಲಿ ಪ್ರಯಾಣಿಸಬಹುದು. ಅದೇರೀತಿ ಶ್ರೀರಂಗಪಟ್ಟಣ – ಗುಡ್ಡೆಹೊಸೂರು ಹೆದ್ದಾರಿ ಕೂಡಾ ಒಂದು ಗಂಟೆ ಪ್ರಯಾಣದ ಅವಧಿಯಾಗಲಿದ್ದು, ಕೆಂಗೇರಿಯಿಂದ ಕುಶಾಲನಗರಕ್ಕೆ ಕೇವಲ ಎರಡು ಗಂಟೆಯಲ್ಲಿ ಪ್ರಯಾಣಿಸಬಹುದಾಗಿದೆ ಎಂದು ವಿವರಿಸಿದರು.
ಪ್ರಯಾಣಿಕರಿಗೆ, ನೆರವಿಗೆ ನೆರವು ನೀಡುವ, ಪರಿಸರಕ್ಕೆ ಹಾನಿಯಾಗದಂತೆ ಜಾರಿಯಾಗುತ್ತಿರುವ ಮಹತ್ತರ ಯೋಜನೆ ಇದಾಗಿದೆ ಎಂದೂ ಅವರು ನುಡಿದರು.
 
ಕೋವಿ ಹಕ್ಕಿನ ವಿವಾದ:
ಕೊಡಗಿನಲ್ಲಿ ಉದ್ಭವಿಸಿರುವ ಕೋವಿ ಹಕ್ಕಿನ ವಿವಾದದ ಕುರಿತು ಪ್ರಸ್ತಾಪಿಸಿದ ಅವರು, ಕೊಡಗಿನ ಜಮ್ಮಾ ಹಿಡುವಳಿದಾರರಿಗೆ ಬ್ರಿಟಿಷರ ಕಾಲದಲ್ಲಿ ಸಿಕ್ಕಿರುವ ವಿಶೇಷವಾದ ಹಕ್ಕು ಇದೆ. ಕನ್ನಡನಾಡಿಗೆ ಹಾಗೂ ರಾಷ್ಟ್ರಕ್ಕೆ ಕೊಡಗಿನ ಕೊಡುಗೆ ಅಪಾರವಾಗಿದೆ,ಕೊಡಗಿನ ಜನತೆಯ ಕೋವಿ ಹಕ್ಕು ಕಸಿಯುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಮಡಿಕೇರಿ ನಗರಸಭಾ ಸದಸ್ಯ ಅಪ್ಪಣ್ಣ ಕಾರ್ಯಾಧ್ಯಕ್ಷ ಡಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments