ಕೊನೆಗೂ ಸೆರೆಸಿಕ್ಕ ಸುಲಿಗೆಕೋರರು

Webdunia
ಮಂಗಳವಾರ, 9 ಅಕ್ಟೋಬರ್ 2018 (15:28 IST)
ರಾತ್ರಿ ವೇಳೆ ಲಾರಿ ಅಡ್ಡಗಟ್ಟಿ ಸುಲಿಗೆ ನಡೆಸುತ್ತಿದ್ದ ಖದೀಮರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಹುಮನಾಬಾದ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 3 ಜನ ಸುಲಿಗೆಕೋರರ ಬಂಧನ ಮಾಡಿದ್ದಾರೆ.

ಮಲ್ಲುರೆಡ್ಡಿ (23), ಯುನೂಸ್ (25), ಮಹ್ಮದ್ ಜಹಾಂಗೀರ್ (25) ಬಂಧಿತ ಆರೋಪಿಗಳಾಗಿದ್ದಾರೆ. ಹುಮನಾಬಾದ್ ಬೀದರ್ ಮಾರ್ಗದ ಅರಣ್ಯಪ್ರದೇಶದಲ್ಲಿ ಸುಲಿಗೆ ನಡೆಸುತ್ತಿದ್ದರು.

ಬಂಧಿತರಿಂದ 3 ಚಾಕು, ಎರಡು ಮೊಬೈಲ್ ಹಾಗೂ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕಳೆದ ತಿಂಗಳು ಹುಮನಾಬಾದ್ ತಾಲೂಕಿನ ಕಬೀರಾಬಾದ್ ವಾಡಿ ಬಳಿ ನಡೆದಿದ್ದ ಸುಲಿಗೆ ಪ್ರಕರಣದಲ್ಲಿ
ಹಣಮಂತರೆಡ್ಡಿ ಎಂಬುವರ ಲಾರಿ ಅಡ್ಡಗಟ್ಟಿ ತೋಗರಿ ಬೆಳೆ ಸುಲಿಗೆ ಮಾಡಿದ್ದ ಖದೀಮರು ಇವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐದುವರೆ ಲಕ್ಷ ರೂ. ಮೌಲ್ಯದ ತೋಗರಿ ಬೆಳೆ ಲಾರಿ ‌ಸಮೇತ ಸುಲಿಗೆ ಮಾಡಿದ್ದರು. ಈ ಕುರಿತು ಹುಮನಾಬಾದ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳು ಮೂರು ವರ್ಷದಿಂದ ಸುಲುಗೆ ನಡೆಸುತ್ತಿದ್ದರು ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಜೈಪುರದಲ್ಲಿ ಶಂಕಿತ ಎಬೋಲಾ ಪ್ರಕರಣ ವರದಿ, ಮಹಿಳೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ

ಮುಂದಿನ ಸುದ್ದಿ
Show comments